ಆ್ಯಪ್ನಗರ

ಸಿಬಿಐ ವಿಚಾರಣೆಗೆ ಹಾಜರಾಗಿ: ಕಾರ್ತಿ ಚಿದಂಬರಂಗೆ ಸುಪ್ರೀಂ ಆದೇಶ

ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಸಿಬಿಐ ತನಿಖೆಗೆ ಸಹಕರಿಸಬೇಕು ಎಂದು ಹೇಳಿದ್ದು, ಮದ್ರಾಸ್‌ ಹೈಕೋರ್ಟ್‌ ಆದೇಶವನ್ನು ತಡೆ ಹಿಡಿದಿದೆ.

ಟೈಮ್ಸ್ ಆಫ್ ಇಂಡಿಯಾ 14 Aug 2017, 5:06 pm
ಹೊಸದಿಲ್ಲಿ: ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಸಿಬಿಐ ತನಿಖೆಗೆ ಸಹಕರಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, ಮದ್ರಾಸ್‌ ಹೈಕೋರ್ಟ್‌ ಆದೇಶವನ್ನು ತಡೆ ಹಿಡಿದಿದೆ.
Vijaya Karnataka Web supreme court orders karti chidambaram to appear before cbi stays cancellation of madras hc lookout notice
ಸಿಬಿಐ ವಿಚಾರಣೆಗೆ ಹಾಜರಾಗಿ: ಕಾರ್ತಿ ಚಿದಂಬರಂಗೆ ಸುಪ್ರೀಂ ಆದೇಶ


ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘಿಸಿದ ಆರೋಪದಡಿ ಸಿಬಿಐ, ಕಾರ್ತಿ ಚಿದಂಬರಂಗೆ ಜಾರಿ ಮಾಡಿದ್ದ ಲುಕ್ ಔಟ್ ನೋಟಿಸ್‌ ಅನ್ನು ಮದ್ರಾಸ್‌ ಹೈಕೋರ್ಟ್‌ ಸೆ.4 ವರೆಗೆ ತಡೆ ನೀಡಿ ಕಳೆದ ಗುರುವಾರದಂದು ಆದೇಶ ಹೊರಡಿಸಿತ್ತು.

ಆದರೆ ಮದ್ರಾಸ್‌ ಹೈಕೋರ್ಟ್‌ನ ಈ ನಡೆಯನ್ನು ಪ್ರಶ್ನಿಸಿರುವ ಸಿಬಿಐ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಸಿಬಿಐ ತನಿಖೆಯಲ್ಲಿ ಭಾಗಿಯಾಗಬೇಕು ಎಂದು ಕಾರ್ತಿಗೆ ಸೂಚಿಸಿದೆ.

ವಿಚಾರಣೆ ವೇಳೆ ಕಾರ್ತಿ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದು, ಮುಂದಿನ ಶುಕ್ರವಾರದವರೆಗೂ ಯಾವುದೇ ಕಾರಣಕ್ಕೂ ದೇಶ ಬಿಟ್ಟು ಹೋಗುವುದಿಲ್ಲ ಮದ್ರಾಸ್‌ ನ್ಯಾಯಾಲಯದ ಆದೇಶಕ್ಕೆ ತಡೆ ನೀಡದಂತೆ ಮನವಿ ಮಾಡಿದ್ದರು. ಆದರೆ ಈ ವೇಳೆ ಸಿಬಿಐ ಪರ ವಕೀಲರು, ಕಾರ್ತಿ ಒಮ್ಮೆಯೂ ಸಿಬಿಐ ವಿಚಾರಣೆಗೆ ಬಂದಿರಲಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸಿಬಿಐ ಮನವಿಯನ್ನೇ ಎತ್ತಿ ಹಿಡಿದ ನ್ಯಾಯಾಧೀಶರು ಕಾರ್ತಿ ಮನವಿಯನ್ನು ತಿರಸ್ಕರಿಸಿ ಸಿಬಿಐ ವಿಚಾರಣೆಯಲ್ಲಿ ಸಹಕರಿಸುವಂತೆ ಹೇಳಿದ್ದಾರೆ.

supreme court orders karti chidambaram to appear before cbi

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ