ಆ್ಯಪ್ನಗರ

'ದಿಶಾ' ಎನ್‌ಕೌಂಟರ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ : ಸ್ವತಂತ್ರ ತನಿಖೆಗೆ ಒಪ್ಪಿದ ಸುಪ್ರೀಂ

ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಹೈದರಾಬಾದ್‌ 'ದಿಶಾ' ಪ್ರಕರಣದ ನಾಲ್ವರು ಆರೋಪಿಗಳ ಎನ್‌ಕೌಂಟರ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಎನ್‌ಕೌಂಟರ್‌ ಕುರಿತು ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

Vijaya Karnataka Web 11 Dec 2019, 9:20 pm
ಹೊಸದಿಲ್ಲಿ: ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಹೈದರಾಬಾದ್‌ 'ದಿಶಾ' ಪ್ರಕರಣದ ನಾಲ್ವರು ಆರೋಪಿಗಳ ಎನ್‌ಕೌಂಟರ್‌ ಪ್ರಕರಣ ಇದೀಗ ಟ್ವಿಸ್ಟ್‌ ಪಡೆದಿದೆ. ಎನ್‌ಕೌಂಟರ್‌ ಕುರಿತು ಕೂಲಂಕಶ ತನಿಖೆಗೆ ಸುಪ್ರೀಂ ಕೋರ್ಟ್‌ ಒಲವು ವ್ಯಕ್ತಪಡಿಸಿದೆ.
Vijaya Karnataka Web supeme court


ಹೈದರಾಬಾದ್‌ ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳು ಡಿ.6ರಂದು ಸೈಬರಾಬಾದ್‌ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮಡಿದಿದ್ದರು. ಈ ಕುರಿತು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಜಿ.ಎಸ್‌. ,ಮಣಿ ಎಂಬುವವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬುಧವಾರ ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಎನ್‌ಕೌಂಟರ್‌ ಕುರಿತು ಸ್ವತಂತ್ರ ತನಿಖೆಗೆ ಸಮ್ಮತಿ ನೀಡಿದೆ. ಪ್ರಕರಣದ ಸತನಿಖೆಗೆ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ನೇಮಕ ಮಾಡುವ ಕುರಿತು ಪ್ರಸ್ತಾವನೆ ಇಟ್ಟಿದೆ.

ಹೈದರಾಬಾದ್‌ ಎನ್‌ಕೌಂಟರ್‌ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಕಕ್ಕೆ ನಾಳೆ (ಗುರುವಾರ) ಆದೇಶ ನೀಡಲಿದೆ. ಇವರು ದೆಹಲಿಯಿಂದಲೇ ಕಾರ್ಯನಿರ್ವಹಿಸಲಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ ಹೇಳಿದ್ದಾರೆ.

ಎನ್‌ಕೌಂಟರ್‌: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಇಂಚಿಂಚೂ ಪರಿಶೀಲನೆ

ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗುತ್ತಿದ್ದಾರೆ. ಹೀಗಾಗಿ ಸಾರ್ಜನಿಕರ ಪೊಲೀಸರ ಕುರಿತು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಸಾರ್ವಜನಿಕರ ದೃಷ್ಟಿಯನ್ನು ಬೇರೆಡೆ ತಿರುಗಿಸುವ ಸಲುವಾಗಿ ನಕಲಿ ಎನ್‌ಕೌಂಟರ್ ಮಾಡಲಾಗಿದೆ. ಈ ಕುರಿತು ಸ್ವತಂತ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ವಕೀಲ ಜಿ.ಎಸ್. ಮಣಿ ಎಂಬುವವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ