ಆ್ಯಪ್ನಗರ

ದೇಗುಲ ಒಮ್ಮೆ ತೆರೆದರೆ, ಎಲ್ಲರೂ ಪ್ರವೇಶಿಸಬಹುದು: ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧ ಬಗ್ಗೆ ಸುಪ್ರೀಂ ಪ್ರಶ್ನೆ

ಸುಪ್ರೀಂ ಕೋರ್ಟ್‌ನಲ್ಲಿ ಸಾಂವಿಧಾನಿಕ ಪೀಠರಿಂದ ವಿಚಾರಣೆ

Vijaya Karnataka Web 18 Jul 2018, 4:41 pm
ಹೊಸದಿಲ್ಲಿ: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿಷೇಧ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ವಿಚಾರಣೆ ಆರಂಭವಾಗಿದೆ.
Vijaya Karnataka Web ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌


ಒಮ್ಮೆ ದೇಗುಲವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿದರೆ, ಎಲ್ಲರೂ ಪ್ರವೇಶಿಸಬಹುದಾಗಿದೆ. ಹೀಗಾಗಿ ಯಾವ ಆಧಾರದ ಮೇಲೆ ಪ್ರವೇಶ ನಿಷೇಧಿಸಲಾಗಿದೆ ಎಂದು ಸುಪ್ರೀಂ ನ್ಯಾಯಪೀಠ ಪ್ರಶ್ನಿಸಿದೆ.

ಅಕ್ಟೋಬರ್‌ 3, 2017ರಲ್ಲಿ ಈ ವಿಚಾರವನ್ನು ಸುಪ್ರೀಂ ಕೋರ್ಟ್‌ನ ಪಂಚ ಸದಸ್ಯರ ಸಾಂವಿಧಾನಿಕ ಪೀಠಕ್ಕೆ ವಿಚಾರಣೆಯನ್ನು ವರ್ಗಾಯಿಸಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ, ನ್ಯಾಯಮೂರ್ತಿಗಳಾದ ರೋಹಿನ್‌ಟನ್‌, ಖಾನ್ವಿಲ್ಕರ್‌, ಡಿ.ವೈ. ಚಂದ್ರಚೂಡ್‌, ಇಂದು ಮಲ್ಹೋತ್ರಾ ನೇತೃತ್ವದ ನ್ಯಾಯಪೀಠ ವಿಚಾರಣೆ ಕೈಗೆತ್ತಿಕೊಂಡಿದೆ.

ಯಾವ ಆಧಾರದ ಮೇಲೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗುತ್ತಿದೆ. ಇದು ಸಂವಿಧಾನಕ್ಕೆ ವಿರೋಧ ಎಂದು ದೀಪಕ್‌ ಮಿಶ್ರಾ ಗಮನ ಸೆಳೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ