ಆ್ಯಪ್ನಗರ

ಪಿ.ಚಿದಂಬರಂ ಪ್ರಕರಣದ ವಾದವನ್ನು ಡಿಕೆಶಿ ಪ್ರಕರಣಕ್ಕೆ ಕಾಪಿ ಪೇಸ್ಟ್ ಮಾಡಿದ್ದಕ್ಕೆ ಇಡಿಗೆ ಸುಪ್ರೀಂ ತರಾಟೆ

ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಜಾಮೀನು ವಿಚಾರಣೆಯಲ್ಲಿ ಮಾಡಿದ ವಾದವನ್ನೇ ಡಿಕೆ ಶಿವಕುಮಾರ್ ಜಾಮೀನು ವಿಚಾರಣೆಯಲ್ಲಿ ಮಾಡಿದ್ದಕ್ಕೆ ಸುಪ್ರೀಂಕೋರ್ಟ್ ಇಡಿಯನ್ನು ತರಾಟೆಗೆ ತೆಗೆದುಕೊಂಡಿದೆ. ಚಿದಂಬರಂ ಪ್ರಕರಣವನ್ನೂ ಡಿಕೆಶಿ ಪ್ರಕರಣವನ್ನೂ ತಾಳೆ ಮಾಡಬೇಡಿ. ಕಾಪಿ ಪೇಸ್ಟ್ ಮಾಡಬೇಡಿ ಎಂದು ಇಡಿ ಪರ ವಕೀಲರಿಗೆ ಬುದ್ಧಿವಾದ ಹೇಳಿದರು.

Agencies 15 Nov 2019, 5:02 pm
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ಡಿಕೆಶಿಗೆ ಬಿಗ್‌ ರಿಲೀಫ್‌ ನೀಡಿದ ಸುಪ್ರೀಂಕೋರ್ಟ್, ಇಡಿ ವಿರುದ್ಧ ತರಾಟೆಗೆ ತೆಗೆದುಕೊಂಡಿದೆ. ಡಿಕೆಶಿ ಜಾಮೀನು ವಿಚಾರದಲ್ಲಿ ಇಡಿ ಮೇಲ್ಮನವಿ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ, ಜಾರಿ ನಿರ್ದೇಶನಾಲಯದ ಪರ ವಕೀಲರ ವಿರುದ್ಧ ಗರಂ ಆಗಿತ್ತು.

ಇಡಿ ಅರ್ಜಿಯನ್ನು ಶುಕ್ರವಾರ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯದ ದ್ವಿ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ ನ್ಯಾ. ಆರ್‌.ಎಫ್‌. ನಾರಿಮನ್ ಹಾಗೂ ಎಸ್‌. ರವೀಂದ್ರ ಭಟ್ ಪೀಠ, ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಚಿದಂಬರಂ ಅರ್ಜಿ ವಿಚಾರಣೆಯ ವೇಳೆ ಮಾಡಿದ ವಾದವನ್ನೇ ಪರಿಷ್ಕರಣೆ ಮಾಡದೆ ಕಾಪಿ ಪೇಸ್ಟ್ ಮಾಡಿದ್ದಕ್ಕೆ ತರಾಟೆಗೆ ತೆಗೆದುಕೊಂಡಿದೆ.


ಅಕ್ಟೋಬರ್‌ 23 ರಂದು ದೆಹಲಿ ಹೈಕೋರ್ಟ್ ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಜಾಮೀನು ನೀಡಿತ್ತು. ಆದರೆ, ಈ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದ ಇಡಿ, ಜಾಮೀನು ನೀಡಿದರೆ ಆರೋಪಿ ಸಾಕ್ಷಿ ನಾಶ ಪಡಿಸಬಹುದು ಎಂದು ಜಾರಿ ನಿರ್ದೇಶನಾಲಯ ವಾದ ಮಾಡಿತ್ತು.

ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ 7 ಬಾರಿ ಶಾಸಕರಾಗಿರುವ ಡಿಕೆ ಶಿವಕುಮಾರ್, ಹೊಸದಿಲ್ಲಿಯ ಕರ್ನಾಟಕ ಭವನದ ಸಿಬ್ಬಂದಿ ಹನುಮಂತಯ್ಯ ಹಾಗೂ ಇತರ ನಾಲ್ವರ ವಿರುದ್ಧ ಪಿಎಂಎಲ್‌ಎ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ