ಆ್ಯಪ್ನಗರ

ಸುಶೀಲ್ ಬೇಸರಗೊಂಡಿಲ್ಲ, ದೊಡ್ಡ ಹುದ್ದೆಗೆ ಸಜ್ಜಾಗುತ್ತಿದ್ದಾರೆ: ದೇವೇಂದ್ರ ಫಡ್ನವೀಸ್!

ಈ ಹಿಂದಿನ ಬಿಹಾರ ಎನ್‌ಡಿಎ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಸುಶೀಲ್ ಕುಮಾರ್ ಮೋದಿ, ಈ ಬಾರಿ ಆ ಹುದ್ದೆಯಿಂದ ವಂಚಿತರಾಗಿದ್ದಾರೆ. ಈ ಕುರಿತು ಮಾತನಾಡಿರುವ ದೇವೇಂದ್ರ ಫಡ್ನವೀಸ್, ಸುಶೀಲ್ ಕುಮಾರ್ ಮೋದಿ ಬೇಸರಗೊಂಡಿಲ್ಲ. ಬದಲಿಗೆ ದೊಡ್ಡ ಜವಾಬ್ದಾರಿ ನಿರ್ವಹಿಸಲು ಸಜ್ಜಾಗುತ್ತಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

Vijaya Karnataka Web 16 Nov 2020, 11:48 pm
ಪಾಟ್ನಾ: ಪ್ರಸಕ್ತ ಬಿಹಾರ ಸರ್ಕಾರದಲ್ಲಿ ಹಿರಿಯ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಭಾಗಿಯಾಗದಿರುವುದು ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ.
Vijaya Karnataka Web sushil kumar modi
ಸಂಗ್ರಹ ಚಿತ್ರ


ಈ ಹಿಂದಿನ ಎನ್‌ಡಿಎ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಸುಶೀಲ್ ಕುಮಾರ್ ಮೋದಿ, ಈ ಬಾರಿ ಆ ಹುದ್ದೆಯಿಂದ ವಂಚಿತರಾಗಿದ್ದು, ಬಿಜೆಪಿ ಪರವಾಗಿ ತಾರ್‌ಕಿಶೋರ್ ಪ್ರಸಾದ್ ಹಾಗೂ ರೇಣುದೇವಿ ಉಪ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.

ಬಿಜೆಪಿಯ ಈ ನಡೆ ಅಚ್ಚರಿಗೆ ಕಾರಣವಾಗಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಆಪ್ತ ಸುಶೀಲ್ ಕುಮಾರ್ ಮೋದಿ ಅವರನ್ನು ಕೈಬಿಟ್ಟಿದ್ದೇಕೆ ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ.

ಸುಶೀಲ್ ಮೋದಿ ಇರದ ಸರ್ಕಾರದ ಮುಖ್ಯಸ್ಥರಾದ ನಿತೀಶ್ ಕುಮಾರ್: ಎಲ್ಲವೂ ಸುಗಮ ಇರಲಿದೆಯೇ?

ಆದರೆ ಈ ಪ್ರಶ್ನೆಗೆ ಉತ್ತರ ನೀಡಿರುವ ಬಿಹಾರ ಉಸ್ತುವಾರಿ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂಂತ್ರು ಹುದ್ದೆ ಕೈತಪ್ಪಿದ್ದಕ್ಕೆ ಸುಶೀಲ್ ಕುಮಾರ್ ಮೋದಿ ಬೇಸರಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಶೀಲ್ ಕುಮಾರ್ ಮೋದಿ ಬೇಸರಗೊಂಡಿಲ್ಲ. ಬದಲಿಗೆ ದೊಡ್ಡ ಜವಾಬ್ದಾರಿ ನಿರ್ವಹಿಸಲು ಸಜ್ಜಾಗುತ್ತಿದ್ದಾರೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಸುಶೀಲ್ ಕುಮಾರ್ ಮೋದಿ ಪಕ್ಷದ ಆಸ್ತಿ. ಅವರ ದೀರ್ಘ ಕಾಲದ ರಾಜಕೀಯ ಅನುಭವವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಳಿಸಿಕೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ಫಡ್ನವೀಸ್ ನುಡಿದಿದ್ದಾರೆ.

ಸುಶೀಲ್ ಮೋದಿ ಡಿಸಿಎಂ ಆಗಿಲ್ಲವೇಕೆ ಎಂದು ಬಿಜೆಪಿಯನ್ನು ಕೇಳಿ: ನಿತೀಶ್ ಕುಮಾರ್!

ಆದರೆ ಸುಶೀಲ್ ಕುಮಾರ್‌ ಮೋದಿ ಅವರಿಗೆ ಕೇಂದ್ರ ಸಂಪುಟದಲ್ಲಿ ಜಾಗ ನೀಡಲಾಗುವುದೇ ಎಂಬ ಪ್ರಶ್ನೆಗೆ ಫಡ್ನವೀಸ್ ಉತ್ತರಿಸಿಲ್ಲ. ಹೀಗಾಗಿ ಸುಶೀಲ್ ಮೋದಿ ಅವರ ರಾಜಕೀಯ ಭವಿಷ್ಯ ಏನಾಗಲಿದೆ ಎಂಬ ಕುತೂಹಲ ಇದೀಗ ಮನೆ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ