ಆ್ಯಪ್ನಗರ

'ಸ್ವದೇಶಿ ಎಂದರೆ ಎಲ್ಲ ವಿದೇಶಿ ವಸ್ತುಗಳನ್ನು ಬಹಿಷ್ಕಾರ ಮಾಡುವುದಲ್ಲ' : ಆರೆಸ್ಸೆಸ್ ಮುಖ್ಯಸ್ಥ

ದೇಶದಲ್ಲಿ ಸಾಂಪ್ರದಾಯಿಕವಾಗಿ ಕೊರತೆಯಿರುವ ಮತ್ತು ಸ್ಥಳೀಯವಾಗಿ ಲಭ್ಯವಿಲ್ಲದ ತಂತ್ರಜ್ಞಾನ ಅಥವಾ ವಸ್ತುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಬಹುದು. ಸ್ವಾವಲಂಬಿ ರಾಷ್ಟ್ರಗಳ ನಡುವೆ ಪರಸ್ಪರ ಸಹಕಾರ ಬೇಕಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.

TIMESOFINDIA.COM 13 Aug 2020, 12:48 pm
ಹೊಸದಿಲ್ಲಿ: ಸ್ವದೇಶಿ ಎಂದರೆ ಎಲ್ಲ ವಿದೇಶಿ ವಸ್ತುಗಳನ್ನು ಬಹಿಷ್ಕಾರ ಮಾಡುವುದು ಎಂಬ ಅರ್ಥವಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
Vijaya Karnataka Web mohan bhagwat


6 ಅಡಿ ಉದ್ದದ ಮನುಷ್ಯನ ಅಸ್ಥಿಪಂಜರ ಪತ್ತೆ: ಮಧುರೈ ಬಳಿ ಕೀಳಡಿ ನಾಗರಿಕತೆಯ ಬೆನ್ನತ್ತಿ...!

ವರ್ಚುವಲ್ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಾಂಪ್ರದಾಯಿಕವಾಗಿ ಕೊರತೆಯಿರುವ ಮತ್ತು ಸ್ಥಳೀಯವಾಗಿ ಲಭ್ಯವಿಲ್ಲದ ತಂತ್ರಜ್ಞಾನ ಅಥವಾ ವಸ್ತುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಬಹುದು. ಸ್ವಾವಲಂಬಿ ರಾಷ್ಟ್ರಗಳ ನಡುವೆ ಪರಸ್ಪರ ಸಹಕಾರ ಬೇಕಿದೆ ಎಂದು ಹೇಳಿರುವ ಅವರು, ಕೊರೊನಾ ಸಂಕಷ್ಟದ ನಂತರ ವಿಶ್ವವನ್ನು ಒಂದು ಮಾರುಕಟ್ಟೆ ಎಂದು ಪರಿಗಣಿಸುವ ಬದಲು ಒಂದು ಕುಟುಂಬ ಎಂಬಂತೆ ಪರಿಗಣಿಸಿ ಆರ್ಥಿಕ ಮಾದರಿ ರೂಪಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

'ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ' :

ಕೇಂದ್ರ ಸರ್ಕಾರದ ಆತ್ಮನಿರ್ಭರ್ ನಿರ್ಧಾರಕ್ಕೆ ಬೆಂಬಲ ಸೂಚಿಸಿದ ಅವರು, ಸ್ವದೇಶಿ ಎಂದರೆ ಸ್ಥಳೀಯ ಉತ್ಪನ್ನಗಳು ಮತ್ತು ತಂತ್ರಜ್ಞಾನಗಳಿಗೆ ಉತ್ತೇಜನದ ಜೊತೆಗೆ ಆದ್ಯತೆ ನೀಡುವುದು ಎಂದರ್ಥ. ಹಾಗಂದ ಮಾತ್ರಕ್ಕೆ ಎಲ್ಲಾ ವಿದೇಶಿ ವಸ್ತುಗಳನ್ನು ಬಹಿಷ್ಕರಿಸಬೇಕು ಎಂದು ಹೇಳುವುದಲ್ಲ ಎಂದು ಹೇಳಿದ್ದಾರೆ. ಇನ್ನು ಸ್ಥಳೀಯವಾಗಿ ಲಭ್ಯವಿಲ್ಲದ ವಸ್ತುಗಳನ್ನು ನಾವು ಆಮದು ಮಾಡಿಕೊಳ್ಳಲೇಬೇಕು, ಮತ್ತು ಅವುಗಳನ್ನು ನಾವು ಭಾರತಕ್ಕೆ ಒಪ್ಪುವಂತೆ ಬದಲಾವಣೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಮ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥ ನೃತ್ಯ ಗೋಪಾಲ್ ದಾಸ್ ಅವರಿಗೆ ಕೊರೊನಾ ಪಾಸಿಟಿವ್!

ಇತ್ತೀಚೆಗೆ ಚೀನಾ ರಾಷ್ಟ್ರ ಗಡಿ ಭಾಗದಲ್ಲಿ ತಗಾದೆ ತೆಗೆದ ನಂತರ ಭಾರತದಲ್ಲಿ ಚೀನೀ ವಸ್ತುಗಳನ್ನು ಬಹಿಷ್ಕಾರ ಮಾಡುವ ಕ್ಯಾಂಪೇನ್ ಆರಂಭವಾಗಿತ್ತು. ನಂತರ ಕೇಂದ್ರ ಸರ್ಕಾರ ಐವತ್ತಕ್ಕೂ ಹೆಚ್ಚು ಚೀನೀ ಆಪ್‌ಗಳನ್ನು ನಿಷೇಧ ಮಾಡಿತ್ತು. ಈ ಚರ್ಷೆ ಬಿಸಿಯಲ್ಲಿರುವಾಗಲೇ ಇದೀಗ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸ್ವದೇಶಿ ಎಂದರೆ ಎಲ್ಲ ವಿದೇಶಿ ವಸ್ತುಗಳನ್ನು ಬಹಿಷ್ಕಾರ ಮಾಡುವುದು ಅಲ್ಲ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ