ಆ್ಯಪ್ನಗರ

ಗುಟ್ಕಾ ಹಗರಣ: ಇದೇ ಮೊದಲ ಬಾರಿಗೆ ಕರ್ತವ್ಯನಿರತ ಡಿಜಿಪಿ ಮೇಲೆ ಸಿಬಿಐ ದಾಳಿ

ಗುಟ್ಕಾ ತಯಾರಕರಿಂದ ಭಾರಿ ಪ್ರಮಾಣದ ಲಂಚ ಸ್ವೀಕರಿಸಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಬುಧವಾರ ತಮಿಳುನಾಡಿನ ಡಿಜಿಪಿ ಟಿ.ಕೆ. ರಾಜೇಂದ್ರನ್‌, ಆರೋಗ್ಯ ಸಚಿವ ಸಿ. ವಿಜಯ ಭಾಸ್ಕರ್‌ ಸೇರಿದಂತೆ ಹಲವರ ಮೇಲೆ ದಾಳಿ ನಡೆಸಿದೆ.

Vijaya Karnataka 6 Sep 2018, 12:39 pm
ಹೊಸದಿಲ್ಲಿ: ಗುಟ್ಕಾ ತಯಾರಕರಿಂದ ಭಾರಿ ಪ್ರಮಾಣದ ಲಂಚ ಸ್ವೀಕರಿಸಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಬುಧವಾರ ತಮಿಳುನಾಡಿನ ಡಿಜಿಪಿ ಟಿ.ಕೆ. ರಾಜೇಂದ್ರನ್‌, ಆರೋಗ್ಯ ಸಚಿವ ಸಿ. ವಿಜಯ ಭಾಸ್ಕರ್‌ ಸೇರಿದಂತೆ ಹಲವರ ಮೇಲೆ ದಾಳಿ ನಡೆಸಿದೆ.
Vijaya Karnataka Web gutkha


ತಮಿಳುನಾಡು, ಕರ್ನಾಟಕ, ಮುಂಬಯಿ, ಪುದುಚೇರಿಗಳ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆದಿದೆ. ಕರ್ತವ್ಯದಲ್ಲಿರುವ ಡಿಜಿಪಿ ಮೇಲೆ ಸಿಬಿಐ ದಾಳಿ ನಡೆಯುತ್ತಿರುವುದು ಇದೇ ಮೊದಲ ಬಾರಿ ಎಂದು ಹೇಳಲಾಗಿದೆ. ಸಚಿವ ಸಿ. ವಿಜಯಭಾಸ್ಕರ್‌ ಅವರ ಮೇಲೆ ಇತ್ತೀಚೆಗಷ್ಟೇ ಆದಾಯ ತೆರಿಗೆ ದಾಳಿಯೂ ನಡೆದಿತ್ತು.

ಈ ಹಿಂದೆ ತಮಿಳುನಾಡು ಸರಕಾರ ರಾಜ್ಯದಲ್ಲಿ ತಂಬಾಕು, ಗುಟ್ಕಾ ಪದಾರ್ಥಗಳ ಮೇಲೆ ನಿಷೇಧ ಹೇರಿತ್ತು. ಆದರೆ ನಿಷೇಧದ ಹೊರತಾಗಿಯೂ ಇವುಗಳ ವ್ಯಾಪಾರ ಎಗ್ಗಿಲ್ಲದೇ ಸಾಗಿತ್ತು. ತಮಿಳುನಾಡು ಆರೋಗ್ಯ ಸಚಿವರು ಮತ್ತು ಪೊಲೀಸ್‌ ಅಧಿಕಾರಿಗಳು ವ್ಯಾಪಾರಿಗಳಿಂದ ಸುಮಾರು 40 ಕೋಟಿ ರೂ. ಕಿಕ್‌ ಬ್ಯಾಕ್‌ ಪಡೆದು ಅನಧಿಕೃತವಾಗಿ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮದ್ರಾಸ್‌ ಹೈಕೋರ್ಟ್‌ ನಲ್ಲೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ್ದ ಮದ್ರಾಸ್‌ ಹೈಕೋರ್ಟ್‌ ಕಳೆದ ಏಪ್ರಿಲ್‌ ಸಿಬಿಐ ತನಿಖೆಗೆ ಆದೇಶಿಸಿತ್ತು. ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ತಮಿಳುನಾಡಿನ ಖ್ಯಾತ ತಂಬಾಕು ಉದ್ಯಮಿ ಮಾಧವ ರಾವ್‌ ಅವರಿಗೆ ಸಂಬಂಧಿಸಿದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಧಿಕಾರಿಗಳಿಗೆ ಡೈರಿಯೊಂದು ಲಭಿಸಿತ್ತು. ಈ ಡೈರಿಯಲ್ಲಿರುವ ಮಾಹಿತಿಯನ್ನಾಧರಿಸಿ ಬುಧವಾರ 40 ಕಡೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ