ಆ್ಯಪ್ನಗರ

ಸಾಲ ತೀರಿಸಲು ಹಣ ಕದ್ದು ಸಿಕ್ಕಿಬಿದ್ದ ಟೆಕ್ಕಿ ಬಂಧನ

ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಲು, ಐಷಾರಾಮಿ ಹೋಟೆಲ್‌ನಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯ ಬ್ಯಾಗ್‌ನಿಂದ ಬಿಟೆಕ್‌ ಎಂಜಿನಿಯರ್‌ ಹಣ ಎಗರಿಸಿ ಸಿಕ್ಕಿಬಿದ್ದಿದ್ದಾನೆ.

TIMESOFINDIA.COM 11 Oct 2018, 6:40 pm
ಹೊಸದಿಲ್ಲಿ: ಸಾಲ ಮರುಪಾವತಿಗಾಗಿ ಮಹಿಳೆಯ ಬ್ಯಾಗ್‌ನಿಂದ ಹಣ ಕದಿಯುವ ವೇಳೆ ಬಹುರಾಷ್ಟ್ರೀಯ ಕಂಪನಿಯೊಂದರ ಸಾಫ್ಟ್‌ವೇರ್‌ ಎಂಜಿನಿಯರ್‌ ಸಿಕ್ಕಿಬಿದ್ದಿದ್ದಾನೆ.
Vijaya Karnataka Web techie


ಚಾಣಕ್ಯಪುರಿಯ ತಾಜ್‌ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಿಂದ ಟೆಕ್ಕಿ ಹಣ ಎಗರಿಸುವ ವೇಳೆ ಸಿಕ್ಕಿಬಿದ್ದಿದ್ದಾನೆ.

ಕಾರ್ಯಕ್ರಮದಲ್ಲಿ ಹಣ ಕಳವಾಗಿರುವ ಬಗ್ಗೆ ಮಹಿಳೆ ದೂರು ನೀಡಿದ್ದ ಹಿನ್ನೆಲೆಯಲ್ಲಿ, ಹೋಟೆಲ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಕಳ್ಳತನದ ದೃಶ್ಯ ಸ್ಪಷ್ಟವಾಗಿ ಸೆರೆಸಿಕ್ಕಿದೆ. ಕಾರ್ಯಕ್ರಮಕ್ಕೆ ಆಹ್ವಾನಿತರ ಪಟ್ಟಿಯ ಸಹಾಯದಿಂದ ಕಳ್ಳ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಎಂಎನ್‌ಸಿಯಲ್ಲಿ ಕಾರ್ಯನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಸಾಹ್ನಿ ಎಂಬುವರೇ ಆರೋಪಿ ಎಂದು ಗೊತ್ತಾಗಿದೆ. ಹೋಟೆಲ್‌ಗೆ ಆ್ಯಪ್‌ ಆಧಾರಿತ ಟ್ಯಾಕ್ಸಿಯಲ್ಲಿ ಸಾಹ್ನಿ ಬಂದಿದ್ದರು. ಈ ಕಾರಿನ ನೋಂದಣಿ ಸಂಖ್ಯೆ ಮೂಲಕ ಕಾರು ಚಾಲಕನನ್ನು ವಿಚಾರಣೆ ನಡೆಸಲಾಗಿದೆ. ಆ್ಯಪ್‌ನಲ್ಲಿ ನಮೂದಿಸಲಾಗಿದ್ದ ಸಾಹ್ನಿ ಮೊಬೈಲ್‌ ಸಂಖ್ಯೆಯಿಂದ ವಿವರ ಪಡೆದು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ