ಆ್ಯಪ್ನಗರ

ಉಗ್ರ ದಾಳಿ ಸಾಧ್ಯತೆ: ದೇಶದ 8 ರಾಜ್ಯಗಳಲ್ಲಿ ಹೈ ಅಲರ್ಟ್

ಗುಪ್ತಚರ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

TIMESOFINDIA.COM 27 Apr 2019, 10:06 am
ಹೊಸದಿಲ್ಲಿ: ಶ್ರೀಲಂಕಾ ನರಮೇದ ಬೆನ್ನೆಲ್ಲೆ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ, ಗೋವಾ, ಮತ್ತು ಮಹಾರಾಷ್ಟ್ರದಲ್ಲಿ ಭಯೋತ್ಪಾದಕರು ವಿಧ್ವಂಸಕ ಕೃತ್ಯ ನಡೆಸುವ ಸಂಚು ರೂಪಿಸಿದ್ದಾರೆ ಎನ್ನಲಾಗಿದ್ದು, ಮುಂಜಾಗ್ರತ ಕ್ರಮವಾಗಿ ಈ 8 ರಾಜ್ಯಗಳಲ್ಲಿ ಗುರುವಾರ ಹೈ ಅಲರ್ಟ್ ಘೋಷಿಸಲಾಗಿದೆ.
Vijaya Karnataka Web terror


ಗುಪ್ತಚರ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಶುಕ್ರವಾರ ಬೆಂಗಳೂರಿನ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಮಾತನಾಡಿದ್ದ. ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ, ಗೋವಾ, ಮತ್ತು ಮಹಾರಾಷ್ಟ್ರದ ಪ್ರಮುಖ ಸ್ಥಳಗಳಲ್ಲಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಮಾಹಿತಿ ನೀಡಿದ್ದ. ಹೀಗಾಗಿ ರಾಜ್ಯದಲ್ಲಿ ಕಟ್ಟೆಚರ ವಹಿಸಲಾಗಿದೆ.

ಶ್ರೀಲಂಕಾದಲ್ಲಿ ಭಾನುವಾರ ಸಂಭವಿಸಿದ ಸರಣಿ ಬಾಂಬ್ ಸ್ಫೋಟಗಳಲ್ಲಿ ಭಾರತೀಯರೂ ಸೇರಿದಂತೆ ಸುಮಾರು 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಸ್ಫೋಟದ ಹಿಂದೆ ಐಸಿಸ್‌ ಕೈವಾಡ ಇರುವ ಹಿನ್ನೆಲೆಯಲ್ಲಿ ಭಾರತವೂ ಕಟ್ಟೆಚ್ಚರ ವಹಿಸಿದೆ. ಈ ಹಿಂದೆ ಐಸಿಸ್‌ ಸೇರಿ ನಾನಾ ಕಡೆ ತಲೆಮರೆಸಿಕೊಂಡಿರುವ 50ಕ್ಕೂ ಅಧಿಕ ಭಾರತೀಯ ಮೂಲದ ಶಂಕಿತ ಉಗ್ರರ ಚಟುವಟಿಕೆಗಳ ಮೇಲೆ ನಿಗಾ ಇಡಲು ಮುಂದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ