ಆ್ಯಪ್ನಗರ

ಕಾಶ್ಮೀರ: ಆರೆಸ್ಸೆಸ್‌ ನಾಯಕನ ಮೇಲೆ ಉಗ್ರರ ದಾಳಿ, ಅಂಗರಕ್ಷಕನ ಹತ್ಯೆ

ಚಂದ್ರಕಾಂತ ಶರ್ಮಾ ಅವರು ಸ್ಥಳೀಯ ಆಸ್ಪತ್ರೆಯೊಂದಕ್ಕೆ ಹೋಗುತ್ತಿದ್ದ ವೇಳೆ ಉಗ್ರರ ದಾಳಿ ನಡೆದಿದೆ. ಶಂಕಿತ ಉಗ್ರರು ಆಸ್ಪತ್ರೆಗೆ ನುಗ್ಗಿ ರಕ್ಷಣಾ ಸಿಬ್ಬಂದಿಯ ಕೈಯಿಂದ ಬಂದೂಕು ಕಸಿದುಕೊಂಡು ಗುಂಡು ಹಾರಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

Vijaya Karnataka Web 9 Apr 2019, 5:07 pm
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್‌ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಸಹಾಯಕರಾಗಿ ಕೆಲಸ ಮಾಡುತ್ತಿರುವ ಚಂದ್ರಕಾಂತ್ ಶರ್ಮಾ ಅವರ ಖಾಸಗಿ ಅಂಗರಕ್ಷಕನನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಶರ್ಮಾ ಅವರು ಆರೆಸ್ಸೆಸ್‌ ಕಾರ್ಯಕರ್ತರಾಗಿದ್ದು ಘಟನೆಯಲ್ಲಿ ಗಾಯಗೊಂಡಿದ್ದಾರೆ.
Vijaya Karnataka Web Kashmir


ಚಂದ್ರಕಾಂತ ಶರ್ಮಾ ಅವರು ಸ್ಥಳೀಯ ಆಸ್ಪತ್ರೆಯೊಂದಕ್ಕೆ ಹೋಗುತ್ತಿದ್ದ ವೇಳೆ ಉಗ್ರರ ದಾಳಿ ನಡೆದಿದೆ. ಶಂಕಿತ ಉಗ್ರರು ಆಸ್ಪತ್ರೆಗೆ ನುಗ್ಗಿ ರಕ್ಷಣಾ ಸಿಬ್ಬಂದಿಯ ಕೈಯಿಂದ ಬಂದೂಕು ಕಸಿದುಕೊಂಡು ಗುಂಡು ಹಾರಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಉಗ್ರರು ಆರೆಸ್ಸೆಸ್ ನಾಯಕರ ಮೇಲೆ ದಾಳಿಗೆ ಯತ್ನಿಸಿದ್ದರು. ಈ ಪ್ರಯತ್ನದಲ್ಲಿ ಗದ್ದಲ ಉಂಟಾದಾಗ ಖಾಸಗಿ ರಕ್ಷಣಾ ಸಿಬ್ಬಂದಿಯನ್ನು ಗುಂಡಿಟ್ಟು ಹತ್ಯೆ ಮಾಡಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ