ಆ್ಯಪ್ನಗರ

ಹೊಸದಿಲ್ಲಿ ಸೇರಿ ಹಲವೆಡೆ ದಾಳಿ ಸಂಚು; ಐಸಿಸ್‌ ನಂಟು ಹೊಂದಿದ ಶಂಕಿತ ಉಗ್ರರ ಬಂಧನ

ದೇಶಾದ್ಯಂತ ಉಗ್ರರು ದಾಳಿ ನಡೆಸಲು ಮತ್ತೆ ಸಂಚು ರೂಪಿಸುತ್ತಿದ್ದಾರೆ. ಗುಪ್ತಚರ ಮಾಹಿತಿ ಮೂಲಕ ಮಾಹಿತಿ ಪಡೆದುಕೊಂಡು ಕಾರ್ಯಾಚರಣೆ ನಡೆಸಿದ ದಿಲ್ಲಿ ಪೊಲೀಸರು ಐಸಿಸ್‌ ಸಂಘಟನೆಯ ಪ್ರಭಾವಕ್ಕೆ ಒಳಗಾದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Vijaya Karnataka Web 9 Jan 2020, 7:21 pm
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿ, ಉತ್ತರ ಪ್ರದೇಶ ಸೇರಿದಂತೆ ಹಲವಾರು ಕಡೆಗಳಲ್ಲಿ ದಾಳಿ ನಡೆಸಲು ಸಂಚು ಹೂಡಿದ್ದ ಶಂಕಿತ ಉಗ್ರರನ್ನು ಹೊಸದಿಲ್ಲಿ ಪೊಲಿಸರು ಬಂಧಿಸಿದ್ದಾರೆ.
Vijaya Karnataka Web ಶಂಕಿತರು
ಶಂಕಿತರು


ಶಂಕಿತರು ಐಸಿಸ್‌ ಉಗ್ರ ಸಂಘಟನೆಯ ಜತೆ ನಂಟು ಹೊಂದಿದ್ದರು. ಹಲವಾರು ತಿಂಗಳುಗಳಿಂದಲೂ ದಾಳಿ ಸಂಚು ರೂಪಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸದಿಲ್ಲಿ ಪೊಲೀಸರು ನಡೆಸಿದ ಬಹುದೊಡ್ಡ ಕಾರ್ಯಾಚರಣೆ ಇದಾಗಿದ್ದು, ಖ್ವಾಜಾ ಮೊಹಿನುದ್ದೀನ್‌ (52), ಸೈಯದ್‌ ಅಲಿ ನವಾಜ್‌ (32) ಮತ್ತು ಅಬ್ದುಲ್‌ ಸಮದ್ (28) ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂವರ ಪೈಕಿ ಇಬ್ಬರು ಹಿಂದೂ ಮುಖಂಡರೊಬ್ಬರ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದರು ಎಂದು ಹೇಳಲಾಗಿದೆ.

ವಿದೇಶದಲ್ಲಿರುವ ಕೆಲವು ವ್ಯಕ್ತಿಗಳು ಇವರನ್ನು ಸಂಪರ್ಕಿಸಿದ್ದರು. ಹೊಸದಿಲ್ಲಿ, ಉತ್ತರ ಪ್ರದೇಶ ಸುತ್ತಮುತ್ತಲ ಪ್ರದೇಶಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ