ಆ್ಯಪ್ನಗರ

ಜಮ್ಮು ಕಾಶ್ಮೀರ ಎನ್‌ಕೌಂಟರ್: ಉಗ್ರನ ಹತ್ಯೆ, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ

ಕಣಿವೆ ನಾಡು ಜಮ್ಮು ಕಾಶ್ಮೀರದ ಅವಂತಿಪೋರಾ ಸೆಕ್ಟರ್‌ ಬಳಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿರುವ ಭದ್ರತಾ ಪಡೆಗಳು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದಿವೆ.

TIMESOFINDIA.COM 8 Oct 2019, 9:43 am
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಎನ್‌ಕೌಂಟರ್ ನಡೆಸಿರುವ ಭಾರತೀಯ ಭದ್ರತಾ ಪಡೆ, ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿವೆ.
Vijaya Karnataka Web Jk


ಅವಂತಿಪೋರಾದ ಹೊರವಲಯದಲ್ಲಿ ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ಪಡೆದ ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳು ಜಂಟಿ ಕಾರ್ಯಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳು ನಡುವೆ ಗುಂಡಿನ ಕಾಳಗ ನಡೆದಿದೆ.

ಹತ್ಯೆಗೀಡಾದ ಉಗ್ರನಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಇಡೀ ಪ್ರದೇಶವನ್ನು ಸುತ್ತವರೆದಿರುವ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿವೆ.

ಯೋಧರ ಗುಂಡಿಗೆ ಬಲಿಯಾದ ಉಗ್ರ ಯಾವ ಸಂಘಟನೆಗೆ ಸೇರಿದವ ಎಂಬ ಮಾಹಿತಿ ಲಭ್ಯವಾಗಿಲ್ಲ. ಸ್ಥಳದಲ್ಲಿ ಕಾರ್ಯಚರಣೆ ಮುಂದುವರೆದಿದೆ ಎಂದು ಭದ್ರತಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕಣಿವೆ ನಾಡಿನಲ್ಲಿ 200 ರಿಂದ 300 ಭಯೋತ್ಪಾದಕರು ಸಕ್ರಿಯರಾಗಿದ್ದಾರೆಂದು ಭಾನುವಾರ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ