ಆ್ಯಪ್ನಗರ

ಕಾಶ್ಮೀರ: ಯೋಧ, 6 ವರ್ಷದ ಬಾಲಕನನ್ನ ಕೊಂದ ಉಗ್ರನನ್ನ ಹೊಡೆದುರುಳಿಸಿ, ತಕ್ಕ ಪಾಠ ಕಲಿಸಿದ ಸೇನೆ!

ಸಿಆರ್‌ಪಿಎಫ್‌ ಯೋಧ ಹಾಗೂ ಆರು ವರ್ಷದ ಬಾಲಕನ ಸಾವಿಗೆ ಕಾರಣವಾಗಿದ್ದ ಉಗ್ರನನ್ನ ಹೊಡೆದುರುಳಿಸಿ​ ಸೇನೆ ಸೇಡು ತೀರಿಸಿಕೊಂಡಿದೆ. ಜಮ್ಮ-ಕಾಶ್ಮೀರದ ಶ್ರೀನಗರದಲ್ಲಿ ಜು.2ರಂದು ತಡೆ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಈ ಉಗ್ರನನ್ನ ಹೊಡೆದುರುಳಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

Vijaya Karnataka Web 3 Jul 2020, 12:55 pm
ಶ್ರೀನಗರ: ಕಳೆದ ಮೂರು ದಿನಗಳ ಹಿಂದೆ ಸಿಆರ್‌ಪಿಎಫ್‌ ಯೋಧ ಹಾಗೂ ಆರು ವರ್ಷದ ಬಾಲಕನ ಸಾವಿಗೆ ಕಾರಣವಾಗಿದ್ದ ಉಗ್ರನನ್ನ ಹೊಡೆದುರುಳಿಸಿ ಸೇನೆ ಸೇಡು ತೀರಿಸಿಕೊಂಡಿದೆ. ಜು.2ರಂದು ತಡೆ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಈ ಉಗ್ರನನ್ನ ಹೊಡೆದುರುಳಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
Vijaya Karnataka Web EbcfKE5U4AEtbwf


ಶ್ರೀನಗರದ ಮಲ್‌ಭಾಗ್‌ನಲ್ಲಿ ನಿನ್ನೆ ಮಧ್ಯರಾತ್ತಿ ನಡೆದ ಗುಂಡಿನ ಕಾಳಗದಲ್ಲಿ ಜಹೀದ್‌ ದಾಸ್ಸ್‌ ಎಂಬ ಉಗ್ರನನ್ನ ಹೊಡೆದರುಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದು, ಮೋಸ್ಟ್ ವಾಟೆಂಡ್‌ ಉಗ್ರನಿಗೆ ತಕ್ಕ ಪಾಠ ಕಲಿಸಿದ್ದೇವೆ ಎಂದಿದ್ದಾರೆ. ಇನ್ನು ಈ ಗುಂಡಿನ ಕಾಳದಲ್ಲಿ ಸಿಆರ್‌ಪಿಎಫ್‌ ಹೆಡ್‌ ಕಾನ್‌ಸ್ಟೇಬಲ್‌ ಕೂಡ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಳೆದ ಮೂರು ದಿನಗಳ ಹಿಂದೆ ಸಿಆರ್‌ಪಿಎಫ್‌ ಯೋಧ ಹುತಾತ್ಮರಾಗಿದ್ದು ಅದೇ ಘಟನೆಯಲ್ಲಿ ಆರು ವರ್ಷದ ಬಾಲಕನೊಬ್ಬ ಸಾವನಪ್ಪಿದ್ದ ಈ ಘಟನೆ ಅನಂತ್‌ನಾಗ್‌ ಜಿಲ್ಲೆಯಲ್ಲಿ ನಡೆದಿತ್ತು. ಬಾಲಕ ತಂದೆಯೊಂದಿಗೆ ತನ್ನ ಕೆಲಸಕ್ಕಾಗಿ ಪಟ್ಟಣಕ್ಕೆ ತೆರಳುತ್ತಿರುವಾಗ ಈ ಘಟನೆ ನಡೆದಿದೆ. ಉಗ್ರ ಜಹೀದ್‌ ದಾಸ್ಸ್‌ ಜಮ್ಮು-ಕಾಶ್ಮೀರ ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆಗೆ ಸೇರಿದವನು ಎಂದು ತಿಳಿದುಬಂದಿದೆ. ಪಾಕಿಸ್ತಾನ ಜಮ್ಮು ಕಾಶ್ಮೀರದ ಯುವಕರನ್ನ ತಲೆ ಹಾಳು ಮಾಡಿ ಉಗ್ರ ಕೃತ್ಯಕ್ಕೆ ಬಳಸಿಕೊಳ್ಳುತ್ತಿದೆ. ಭಾರತದ ಇವರನ್ನ ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ.
ಪ್ರಧಾನಿ ಮೋದಿ ಲಡಾಖ್ ಭೇಟಿ ಗೌಪ್ಯವಾಗಿ ಇಟ್ಟಿದ್ದೇಕೆ?: ಅಚ್ಚರಿಯಲ್ಲಿ ಮುಳುಗಿದ ಚೀನಾ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ