ಆ್ಯಪ್ನಗರ

ಕಣಿವೆಯಲ್ಲಿ ಮತ್ತೆ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು!

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಬೇಟೆಯನ್ನು ಮುಂದುವರೆಸಿರುವ ಭದ್ರತಾ ಪಡೆಗಳು ಇಂದು(ಭಾನುವಾರ) ಮತ್ತೆ ಮೂವರು ಉಗ್ರರನ್ನು ಹೊಡದುರುಳಿಸಿದ್ದಾರೆ. ಇಲ್ಲಿನ ಜಡಿಬಾಳ್ ಸೌರಾ ಪ್ರದೇಶದಲ್ಲಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಮೂವರೂ ಉಗ್ರರನ್ನು ಭದ್ರತಾ ಪಡೆಗಳು ಹೊಡದುರುಳಿಸುವಲ್ಲಿ ಯಶಸ್ವಿಯಾಗಿವೆ.

Vijaya Karnataka Web 21 Jun 2020, 1:48 pm
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಬೇಟೆಯನ್ನು ಮುಂದುವರೆಸಿರುವ ಭದ್ರತಾ ಪಡೆಗಳು ಇಂದು(ಭಾನುವಾರ) ಮತ್ತೆ ಮೂವರು ಉಗ್ರರನ್ನು ಹೊಡದುರುಳಿಸಿದ್ದಾರೆ.
Vijaya Karnataka Web Encounter
ಕಣಿವೆಯಲ್ಲಿ ಉಗ್ರರ ಎನ್‌ಕೌಂಟರ್


ಇಲ್ಲಿನ ಜಡಿಬಾಳ್ ಸೌರಾ ಪ್ರದೇಶದಲ್ಲಿ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಮೂವರೂ ಉಗ್ರರನ್ನು ಭದ್ರತಾ ಪಡಗಳು ಹೊಡದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎನ್‌ಕೌಂಟರ್ ಆರಂಭಕ್ಕೂ ಮುನ್ನ ಶರಣಾಗುವಂತೆ ಪೊಲೀಸರು ಮಾಡಿದ ಮನವಿಗೆ ಓಗೊಡದ ಉಗ್ರರು, ಭದ್ರತಾ ಪಡೆಗಳತ್ತ ಗುಂಡಿನ ಸುರಿಮಳೆಗೈದರು.


ಇದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರೂ ಉಗ್ರರು ಹತರಗಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಕಣಿವೆಯಲ್ಲಿ ಭರ್ಜರಿ ಬೇಟೆ: 24 ಗಂಟೆಗಳಲ್ಲಿ 8 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ!

ಇನ್ನು ಸುತ್ತಮುತ್ತಲಿನ ಪ್ರದೇಶದಲ್ಲಿ ಉಗ್ರರು ಅಡಗಿರಬಹುದಾದ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ಸಂಹಾರ ನಡೆಯುತ್ತಿದ್ದು, ಇಂದೂ ಕೂಡ ಪ್ರಮುಖ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ