ಆ್ಯಪ್ನಗರ

'ಸಾಧ್ವಿ' ಶಾಪಕ್ಕಿಂತ ಉದ್ಯೋಗ ಕಳೆದುಕೊಂಡವರ ಶಾಪ ಪರಿಣಾಮಕಾರಿ: ಶಿವಸೇನೆ

25 ವರ್ಷದ ಹಳೆಯ ಏರ್‌ಲೈನ್‌ ಭಾರಿ ನಷ್ಟದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ವಿಚಾರಕ್ಕೆ ಸಂಬಂಧಿಸಿ ಸಾಮ್ನಾ ತನ್ನ ಸಂಪಾದಕೀಯದಲ್ಲಿ ಈ ಸಲಹೆ ನೀಡಿದೆ.

PTI 22 Apr 2019, 11:52 am
ಮುಂಬಯಿ: 'ಸಾಧ್ವಿ' ಅವರ ಶಾಪಕ್ಕಿಂತ ಉದ್ಯೋಗ ಕಳೆದುಕೊಂಡವರ ಶಾಪ ಹೆಚ್ಚು ಪರಿಣಾಮಕಾರಿಯಾಗಿದ್ದು, ನಷ್ಟದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಜೆಟ್‌ ಏರ್‌ವೇಸ್‌ಅನ್ನು ಉಳಿಸಿಕೊಂಡು, ಅಲ್ಲಿನ ಸಿಬ್ಬಂದಿಗಳು ಉದ್ಯೋಗ ಕಳೆದುಕೊಳ್ಳುವುದನ್ನು ತಪ್ಪಿಸಬೇಕು ಎಂದು ಕೇಂದ್ರ ಸರಕಾರಕ್ಕೆ ಶಿವಸೇನೆ ಸಲಹೆ ನೀಡಿದೆ.
Vijaya Karnataka Web Shiv Sena chief Uddhav Thackeray


ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರೂ ಮತ್ತು ಇಂದಿರಾ ಗಾಂಧಿ ಅವರು ವಿಮೆ ಮತ್ತು ಏರ್‌ಲೈನ್‌ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿದ್ದನ್ನು ಉದಾಹರಣೆಯಾಗಿ ತೆಗೆದುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರೇಕೆ ಜೆಟ್‌ ಏರ್‌ವೇಸ್‌ ನೆರವಿಗೆ ಧಾವಿಸಬಾರದು ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರಶ್ನಿಸಿದ್ದಾರೆ.

25 ವರ್ಷದ ಹಳೆಯ ಏರ್‌ಲೈನ್‌ ಭಾರಿ ನಷ್ಟದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ವಿಚಾರಕ್ಕೆ ಸಂಬಂಧಿಸಿ ಸಾಮ್ನಾ ತನ್ನ ಸಂಪಾದಕೀಯದಲ್ಲಿ ಈ ಸಲಹೆ ನೀಡಿದೆ.

ಇತ್ತೀಚೆಗೆ ಉತ್ತರ ಪ್ರದೇಶದ ಲಖನೌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು ಹಿರಿಯ ಪೊಲೀಸ್‌ ಅಧಿಕಾರಿ ಹೇಮಂತ್‌ ಕರ್ಕರೆ ತಮ್ಮ ಶಾಪದಿಂದ ಸಾವನ್ನಪ್ಪಿದರು ಎಂದು ವಿವಾದಿತ ಹೇಳಿಕೆ ನೀಡಿದ್ದರು. ನಂತರ 26/11 ಮುಂಬಯಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ಕರೆ ಸಾವಿನ ಬಗ್ಗೆ ತಾವಾಡಿದ ಮಾತನ್ನು ಹಿಂಪಡೆದು ಕ್ಷಮೆ ಕೇಳಿದ್ದರು.
ಹೇಮಂತ್ ಕರ್ಕರೆ ಸಾವನ್ನಪ್ಪಿದ್ದು ನನ್ನ ಶಾಪದಿಂದ ಎಂಬ ಹೇಳಿಕೆ ಹಿಂಪಡೆದು ಕ್ಷಮೆ ಕೋರಿದ ಸಾಧ್ವಿ ಪ್ರಜ್ಞಾ ಸಿಂಗ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ