ಹೊಸ ದಿಲ್ಲಿ: ದೇಶದಲ್ಲಿ ಕಲ್ಲಿದ್ದಲು ಕೊರತೆ ಎದುರಾಗಿದೆ, ಹೀಗಾಗಿ ವಿದ್ಯುತ್ ಉತ್ಪಾದನೆ ಹಾಗೂ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬ ವರದಿಗಳನ್ನು ಕಲ್ಲಿದ್ದಲು ಸಚಿವಾಲಯ ತಳ್ಳಿ ಹಾಕಿದೆ. ದೇಶದಲ್ಲಿ ಸಾಕಷ್ಟು ಕಲ್ಲಿದ್ದಲಿನ ಸಂಗ್ರಹ ಇದೆ ಎಂದು ಸ್ಪಷ್ಟನೆ ನೀಡಿದೆ. ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಆಗಲಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದೆ. ದೇಶಾದ್ಯಂತ ಇರುವ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಸುಮಾರು 72 ಲಕ್ಷ ಟನ್ ಕಲ್ಲಿದ್ದಲಿನ ಸಂಗ್ರಹ ಇದೆ. ಈ ಕಲ್ಲಿದ್ದಲು ಮುಂದಿನ 4 ದಿನಗಳಿಗೆ ಸಾಕಾಗುವಷ್ಟಿದೆ. ಜೊತೆಯಲ್ಲೇ ಕಲ್ಲಿದ್ದಲು ನಿಗಮದಲ್ಲಿ ಸುಮಾರು 400 ಲಕ್ಷ ಟನ್ ಕಲ್ಲಿದ್ದಲು ಸಂಗ್ರಹವಿದೆ. ಈ ಕಲ್ಲಿದ್ದಲನ್ನು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರಗಳಿಗೆ ರವಾನಿಸಲಾಗುವುದು ಎಂದು ಸಚಿವಾಲಯ ವಿವರಣೆ ನೀಡಿದೆ.
ದೇಶದಲ್ಲಿ ಈ ವರ್ಷ ಸೆಪ್ಟೆಂಬರ್ 2021ರವರೆಗೂ ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 24ರಷ್ಟು ಏರಿಕೆ ಕಂಡಿದೆ. ಬೇಡಿಕೆ ಹಾಗೂ ಪೂರೈಕೆ ಆಧಾರದ ಮೇಲೆ ವಿದ್ಯುತ್ ಉತ್ಪಾದನೆಯೂ ಹೆಚ್ಚಳಗೊಂಡಿದೆ. ದೇಶಾದ್ಯಂತ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಪ್ರತಿ ದಿನ 18.5 ಲಕ್ಷ ಟನ್ ಕಲ್ಲಿದ್ದಲು ಅಗತ್ಯತೆ ಇದೆ. ಆದ್ರೆ, ಸದ್ಯ 17.5 ಲಕ್ಷ ಟನ್ ಕಲ್ಲಿದ್ದಲನ್ನು ಮಾತ್ರ ಪ್ರತಿದಿನ ಪೂರೈಕೆ ಮಾಡಲಾಗುತ್ತಿದೆ. ಮುಂಗಾರು ಮಳೆಯ ಅಬ್ಬರದಿಂದಾಗಿ ಕಲ್ಲಿದ್ದಲು ಗಣಿಗಾರಿಕೆ, ಸಾಗಾಟದ ಮೇಲೆ ಒಂದಿಷ್ಟು ಪರಿಣಾಮ ಉಂಟಾಗಿದೆ. ಆದ್ರೆ, ಪೂರೈಕೆ ಸ್ಥಗಿತವಾಗಿಲ್ಲ ಎಂದು ಸಚಿವಾಲಯ ತಿಳಿಸಿದೆ.
ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಭಾರೀ ಮಳೆ ಇದ್ದರೂ ಕೂಡಾ ಕಲ್ಲಿದ್ದಲು ನಿಗಮವು ಈವರೆಗೆ 255 ಮೆಟ್ರಿಕ್ ಟನ್ ಕಲ್ಲಿದ್ದಲನ್ನು ಪೂರೈಕೆ ಮಾಡಿದೆ. ಈಗಲೂ ಪ್ರತಿ ದಿನ 14 ಲಕ್ಷ ಟನ್ ಕಲ್ಲಿದ್ದಲನ್ನು ಉತ್ಪಾದನೆ ಮಾಡುತ್ತಿದೆ. ಇದೀಗ ಉತ್ಪಾದನೆಯನ್ನು 15 ಲಕ್ಷ ಟನ್ಗೆ ಏರಿಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಕ್ಟೋಬರ್ ಕೊನೆ ವೇಳೆಗೆ ಪ್ರತಿ ದಿನ 16 ಲಕ್ಷ ಟನ್ ಉತ್ಪಾದಿಸುವ ಗುರಿ ಇದೆ ಎಂದು ಸಚಿವಾಲಯ ತಿಳಿಸಿದೆ. ಅಷ್ಟೇ ಅಲ್ಲ, ಎಸ್ಸಿಸಿಎಲ್ ಕೂಡಾ ಪ್ರತಿ ದಿನ 3 ಲಕ್ಷಕ್ಕೂ ಹೆಚ್ಚು ಟನ್ ಕಲ್ಲಿದ್ದಲನ್ನು ಉತ್ಪಾದಿಸುತ್ತಿದೆ ಎಂದು ಮಾಹಿತಿ ನೀಡಿದೆ.
ಭಾರೀ ಮಳೆ, ಕಲ್ಲಿದ್ದಲು ಆಮದು ಸ್ಥಗಿತ ಹಾಗೂ ವಿದ್ಯುತ್ ಬೇಡಿಕೆ ಹೆಚ್ಚಳದಿಂದಾಗಿ ದೇಶದಲ್ಲಿ ಕಲ್ಲಿದ್ದಲಿನ ಕೊರತೆ ಉಂಟಾಗಿತ್ತು, ಬೇಡಿಕೆಯೂ ಹೆಚ್ಚಾಗಿತ್ತು. ಹೀಗಾಗಿ, ಉತ್ಪಾದನೆಯನ್ನೂ ಹೆಚ್ಚಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಲ್ಲಿದ್ದಲಿನ ಬೆಲೆ ಏರಿಕೆಯಾಗಿದೆ. ಹೀಗಾಗಿ, ಕಲ್ಲಿದ್ದಲು ಆಮದನ್ನು ಶೇ. 30ರಷ್ಟು ಕಡಿತ ಮಾಡಲಾಗಿದೆ. ಇನ್ನೊಂದೆಡೆ ದೇಶದಲ್ಲಿ ವಿದ್ಯುತ್ ಬೇಡಿಕೆ ಶೇ. 24ರಷ್ಟು ಏರಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಜೊತೆಯಲ್ಲೇ ಅಲ್ಯುಮಿನ್ಯುಂ, ಸಿಮೆಂಟ್ ಹಾಗೂ ಸ್ಟೀಲ್ ಉದ್ಯಮಕ್ಕೂ ಕಲ್ಲಿದ್ದಲು ಬೇಕಿದ್ದು, ಕಲ್ಲಿದ್ದಲು ನಿಗಮವು ಈ ಕೈಗಾರಿಕೆಗಳಿಗೆ 2.5 ಲಕ್ಷ ಟನ್ ಕಲ್ಲಿದ್ದಲನ್ನು ಪೂರೈಕೆ ಮಾಡಿದೆ ಎಂದು ಮಾಹಿತಿ ನೀಡಿದೆ.
ದೇಶದಲ್ಲಿ ಈ ವರ್ಷ ಸೆಪ್ಟೆಂಬರ್ 2021ರವರೆಗೂ ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 24ರಷ್ಟು ಏರಿಕೆ ಕಂಡಿದೆ. ಬೇಡಿಕೆ ಹಾಗೂ ಪೂರೈಕೆ ಆಧಾರದ ಮೇಲೆ ವಿದ್ಯುತ್ ಉತ್ಪಾದನೆಯೂ ಹೆಚ್ಚಳಗೊಂಡಿದೆ. ದೇಶಾದ್ಯಂತ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಪ್ರತಿ ದಿನ 18.5 ಲಕ್ಷ ಟನ್ ಕಲ್ಲಿದ್ದಲು ಅಗತ್ಯತೆ ಇದೆ. ಆದ್ರೆ, ಸದ್ಯ 17.5 ಲಕ್ಷ ಟನ್ ಕಲ್ಲಿದ್ದಲನ್ನು ಮಾತ್ರ ಪ್ರತಿದಿನ ಪೂರೈಕೆ ಮಾಡಲಾಗುತ್ತಿದೆ. ಮುಂಗಾರು ಮಳೆಯ ಅಬ್ಬರದಿಂದಾಗಿ ಕಲ್ಲಿದ್ದಲು ಗಣಿಗಾರಿಕೆ, ಸಾಗಾಟದ ಮೇಲೆ ಒಂದಿಷ್ಟು ಪರಿಣಾಮ ಉಂಟಾಗಿದೆ. ಆದ್ರೆ, ಪೂರೈಕೆ ಸ್ಥಗಿತವಾಗಿಲ್ಲ ಎಂದು ಸಚಿವಾಲಯ ತಿಳಿಸಿದೆ.
ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಭಾರೀ ಮಳೆ ಇದ್ದರೂ ಕೂಡಾ ಕಲ್ಲಿದ್ದಲು ನಿಗಮವು ಈವರೆಗೆ 255 ಮೆಟ್ರಿಕ್ ಟನ್ ಕಲ್ಲಿದ್ದಲನ್ನು ಪೂರೈಕೆ ಮಾಡಿದೆ. ಈಗಲೂ ಪ್ರತಿ ದಿನ 14 ಲಕ್ಷ ಟನ್ ಕಲ್ಲಿದ್ದಲನ್ನು ಉತ್ಪಾದನೆ ಮಾಡುತ್ತಿದೆ. ಇದೀಗ ಉತ್ಪಾದನೆಯನ್ನು 15 ಲಕ್ಷ ಟನ್ಗೆ ಏರಿಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಕ್ಟೋಬರ್ ಕೊನೆ ವೇಳೆಗೆ ಪ್ರತಿ ದಿನ 16 ಲಕ್ಷ ಟನ್ ಉತ್ಪಾದಿಸುವ ಗುರಿ ಇದೆ ಎಂದು ಸಚಿವಾಲಯ ತಿಳಿಸಿದೆ. ಅಷ್ಟೇ ಅಲ್ಲ, ಎಸ್ಸಿಸಿಎಲ್ ಕೂಡಾ ಪ್ರತಿ ದಿನ 3 ಲಕ್ಷಕ್ಕೂ ಹೆಚ್ಚು ಟನ್ ಕಲ್ಲಿದ್ದಲನ್ನು ಉತ್ಪಾದಿಸುತ್ತಿದೆ ಎಂದು ಮಾಹಿತಿ ನೀಡಿದೆ.
ಭಾರೀ ಮಳೆ, ಕಲ್ಲಿದ್ದಲು ಆಮದು ಸ್ಥಗಿತ ಹಾಗೂ ವಿದ್ಯುತ್ ಬೇಡಿಕೆ ಹೆಚ್ಚಳದಿಂದಾಗಿ ದೇಶದಲ್ಲಿ ಕಲ್ಲಿದ್ದಲಿನ ಕೊರತೆ ಉಂಟಾಗಿತ್ತು, ಬೇಡಿಕೆಯೂ ಹೆಚ್ಚಾಗಿತ್ತು. ಹೀಗಾಗಿ, ಉತ್ಪಾದನೆಯನ್ನೂ ಹೆಚ್ಚಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಲ್ಲಿದ್ದಲಿನ ಬೆಲೆ ಏರಿಕೆಯಾಗಿದೆ. ಹೀಗಾಗಿ, ಕಲ್ಲಿದ್ದಲು ಆಮದನ್ನು ಶೇ. 30ರಷ್ಟು ಕಡಿತ ಮಾಡಲಾಗಿದೆ. ಇನ್ನೊಂದೆಡೆ ದೇಶದಲ್ಲಿ ವಿದ್ಯುತ್ ಬೇಡಿಕೆ ಶೇ. 24ರಷ್ಟು ಏರಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಜೊತೆಯಲ್ಲೇ ಅಲ್ಯುಮಿನ್ಯುಂ, ಸಿಮೆಂಟ್ ಹಾಗೂ ಸ್ಟೀಲ್ ಉದ್ಯಮಕ್ಕೂ ಕಲ್ಲಿದ್ದಲು ಬೇಕಿದ್ದು, ಕಲ್ಲಿದ್ದಲು ನಿಗಮವು ಈ ಕೈಗಾರಿಕೆಗಳಿಗೆ 2.5 ಲಕ್ಷ ಟನ್ ಕಲ್ಲಿದ್ದಲನ್ನು ಪೂರೈಕೆ ಮಾಡಿದೆ ಎಂದು ಮಾಹಿತಿ ನೀಡಿದೆ.