ಆ್ಯಪ್ನಗರ

ಕಾಶ್ಮೀರ: ಮೂವರು ಲಷ್ಕರೆ ಉಗ್ರರ ಹತ್ಯೆ

ಭಾರತೀಯ ಭದ್ರತಾ ಪಡೆ ಸಿಬ್ಬಂದಿ ಬುಧವಾರ ಜಮ್ಮು ಮತ್ತು ಕಾಶ್ಮೀರದ ಹಂಡ್ವಾರ ವಲಯದಲ್ಲಿ ತೀವ್ರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಮೂವರು ಲಷ್ಕರೆ ತಯ್ಬಾ ಉಗ್ರರನ್ನು ಹೊಡೆದುರುಳಿಸಿದ್ದಾರೆ.

Vijaya Karnataka Web 21 Nov 2017, 9:13 pm

ಶ್ರೀನಗರ: ಭಾರತೀಯ ಭದ್ರತಾ ಪಡೆ ಸಿಬ್ಬಂದಿ ಬುಧವಾರ ಜಮ್ಮು ಮತ್ತು ಕಾಶ್ಮೀರದ ಹಂಡ್ವಾರ ವಲಯದಲ್ಲಿ ತೀವ್ರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಮೂವರು ಲಷ್ಕರೆ ತಯ್ಬಾ ಉಗ್ರರನ್ನು ಹೊಡೆದುರುಳಿಸಿದ್ದಾರೆ.

Vijaya Karnataka Web three militants killed in kashmir encounter
ಕಾಶ್ಮೀರ: ಮೂವರು ಲಷ್ಕರೆ ಉಗ್ರರ ಹತ್ಯೆ


ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂಡ್ವಾರ ವಲಯದ ಮಾಗಮ್‌ ಎಂಬಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆ ಕೈಗೊಂಡಿತ್ತು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಉಗ್ರಗಾಮಿಗಳಿಗೆ ಶರಣಾಗುವಂತೆ ಭದ್ರತಾ ಪಡೆ ಸಿಬ್ಬಂದಿ ಸೂಚಿಸಿದ್ದಾರೆ. ಉಗ್ರರು ಅದಕ್ಕೆ ಕಿವಿಗೊಡದೆ ಭದ್ರತಾ ಪಡೆಗಳ ಮೇಲೆಯೇ ಗುಂಡು ಹಾರಿಸತೊಡಗಿದ್ದಾರೆ. ಅದಕ್ಕೆ ಪ್ರತಿಯಾಗಿ ಭದ್ರತಾ ಪಡೆಯೂ ಗುಂಡಿದ ದಾಳಿ ನಡೆಸಿದೆ. ಹೆಚ್ಚೂ ಕಡಿಮೆ ಒಂದು ಗಂಟೆ ಕಾಲ ಗುಂಡಿನ ಚಕಮಕಿ ನಡೆದಿದೆ. ಆಗ ಮೂವರು ಪಾಕಿಸ್ತಾನಿ ಲಷ್ಕರೆ ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ವಿವರ ಒದಗಿಸಿದ್ದಾರೆ.

ಮಧ್ಯಾಹ್ನದ ಬಳಿಕ ಕುಪ್ವಾರ ಜಿಲ್ಲೆಯ ತ್ರೆಹಗಂ ವಲಯದ ಝಿರ್ಹಾಮಾ ಎಂಬಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಮತ್ತೊಂದು ಗುಂಡಿನ ಕಾಳಗ ನಡೆದಿದೆ. ''ಪೊಲೀಸ್‌, ಸಿಆರ್‌ಪಿಎಫ್‌ ಹಾಗೂ ಸೇನೆ ಒಟ್ಟಾಗಿ ಪಹರೆ ಬಿಗಿಗೊಳಿಸಿದ್ದು, ಉಗ್ರಗಾಮಿಗಳನ್ನು ಹೊಡೆದೋಡಿಸಲು ಪ್ರಯತ್ನಿಸುತ್ತಿವೆ,'' ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

Three militants killed in Kashmir encounter

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ