ಆ್ಯಪ್ನಗರ

ಮೂವರು ಮಕ್ಕಳನ್ನು ಕೊಂದು ಸಾವಿಗೆ ಶರಣಾದ ಕರ್ನಾಟಕದ ಮಹಿಳೆ

ಆರ್ಥಿಕ ಸಮಸ್ಯೆಯಿಂದಾಗಿ ನೊಂದ ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ಕೊಂದು ಸಾವಿಗೆ ಶರಣಾಗಿದ್ದಾಳೆ.

Times Now 29 Jul 2019, 2:11 pm
ಪುಣೆ: ಆರ್ಥಿಕ ಸಮಸ್ಯೆಯಿಂದ ನೊಂದಿದ್ದ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ಭಾನುವಾರ ಬೆಳಕಿಗೆ ಬಂದಿದೆ.
Vijaya Karnataka Web Hang New


ಮೃತಳನ್ನು ಕರ್ನಾಟಕ ಮೂಲದ 28 ವರ್ಷದ ಫಾತಿಮಾ, ಆಕೆಯ ಮಕ್ಕಳಾದ ಅಲಿಯಾ (9), ಜೋಭಾ (7) ಮತ್ತು ಜಿಯಾನ್ (6) ಎಂದು ಗುರುತಿಸಲಾಗಿದೆ. ಈ ಘಟನೆ ನಡೆದಾಗ ಫಾತಿಮಾ ಪತಿ ಅಕ್ರಮ್ ಮನೆಯಲ್ಲಿರಲಿಲ್ಲ.

ಪಿಂಪ್ರಿ ಚಿಂಚವಾಡ ಪ್ರದೇಶದಲ್ಲಿ ವಾಸವಾಗಿದ್ದ ಕುಟುಂಬಕ್ಕೆ ಆರ್ಥಿಕ ಹೊಡೆತ ಬಡಿದಿತ್ತು. ಹಣ್ಣಿನ ವ್ಯಾಪಾರಿಯಾಗಿದ್ದ ಅಕ್ರಮ್ ಇತ್ತೀಚಿಗೆ ಭಾರಿ ನಷ್ಟವನ್ನು ಅನುಭವಿಸಿದ್ದ. ಹಣಕಾಸಿನ ಸಮಸ್ಯೆ ಹಿನ್ನೆಲೆಯಲ್ಲಿ ದಂಪತಿ ನಡುವೆ ಸದಾ ಜಗಳವಾಗುತ್ತಿತ್ತು. ಇದೆಲ್ಲದರಿಂದ ಬೇಸತ್ತ ಫಾತಿಮಾ ತನ್ನ ಮೂವರು ಮಕ್ಕಳಿಗೂ ನೇಣು ಹಾಕಿ ಸಾಯಿಸಿ ಬಳಿಕ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸಂಜೆ ಪತಿ ಮನೆಗೆ ಮರಳಿದಾಗ ಬಾಗಿಲು ಒಳಗಡೆಯಿಂದ ಮುಚ್ಚಿತ್ತು. ಎಷ್ಟೇ ತಟ್ಟಿದರೂ ಬಾಗಿಲು ತೆರೆಯದಿದ್ದಾಗ ಆತ ಪೊಲೀಸರಿಗೆ ಕರೆ ಮಾಡಿದ. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಒಡೆದು ನೋಡಿದಾಗ ನಾಲ್ಕು ಮೃತದೇಹಗಳು ಕಂಡು ಬಂದಿವೆ.

ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿಲ್ಲ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ