ಆ್ಯಪ್ನಗರ

ಟಿಟಿಡಿ ಸಿಬ್ಬಂದಿಗೆ ಕೊರೊನಾ! ಗೋವಿಂದರಾಜ ಸ್ವಾಮಿ ದೇಗುಲ ಎರಡು ದಿನ ಬಂದ್!

ಟಿಟಿಡಿ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಿರುಪತಿಯ ಗೋವಿಂದರಾಜ ಸ್ವಾಮಿ ದೇವಾಲಯವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ. ಜೂನ್.14ರ ಬಳಿಕ ದೇವಾಲಯದ ಬಾಗಿಲನ್ನು ತೆರೆಯುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Vijaya Karnataka Web 13 Jun 2020, 3:34 pm
ತಿರುಪತಿ: ಟಿಟಿಡಿ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಿರುಪತಿಯ ಗೋವಿಂದರಾಜ ಸ್ವಾಮಿ ದೇವಾಲಯವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ.
Vijaya Karnataka Web govindaraja swamy temple


ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟ ವಿಚಾರ ತಿಳಿಯುತ್ತಿದ್ದಂತೆಯೇ ಟಿಟಿಡಿ, ಗೋವಿಂದರಾಜ ಸ್ವಾಮಿ ದೇವಾಲಯವನ್ನು ಬಂದ್ ಮಾಡುವಂತೆ ಆದೇಶಿಸಿದೆ. ಜೂನ್.13 ಮತ್ತು 14 ಎರಡು ದಿನಗಳ ಕಾಲ ದೇವಾಲಯವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಜೂನ್.14ರ ಬಳಿಕ ದೇವಾಲಯದ ಬಾಗಿಲನ್ನು ತೆರೆಯುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಯಾನಿಟೈಸ್ ಇನ್ಸ್ ಪೆಕ್ಟರ್ ಒಬ್ಬರು ಅನಾರೋಗ್ಯಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಟಿಟಿಡಿ ಕೇಂದ್ರೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರಲ್ಲಿ ವೈರಸ್ ದೃಢಪಟ್ಟಿದೆ ಎಂದು ಟಿಟಿಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರೋಟ 'ಜಿಎಸ್‌ಟಿ' ಶೇ.18ಕ್ಕೆ ಏರಿಕೆ! ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ಜಟಾಪಟಿ

ಇದೀಗ ವ್ಯಕ್ತಿಯನ್ನು ಕೊರೋನಾ ಚಿಕಿತ್ಸೆಗೆ ನಿಯೋಜಿಸಲಾಗಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರೊಂದಿಗೆ ಸಂಪರ್ಕದಲ್ಲಿದ್ದ ಇಬ್ಬರು ಕುಟುಂಬ ಸದಸ್ಯರು, ಟಿಟಿಡಿ ಸಿಬ್ಬಂದಿಗಳೂ ಸೇರಿ ಒಟ್ಟು 8 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ತ್ವರಿತ ಕೊರೊನಾ ಟೆಸ್ಟಿಂಗ್: ರೋಗ ಲಕ್ಷಣ ಇರುವವರಿಗೆ ಮೊದಲ ಆದ್ಯತೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ