ಜುಲೈ 21 ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಷಣದ ನೇರ ಪ್ರಸಾರಕ್ಕೆ ಟಿಎಂಸಿ ಯೋಜನೆ!

Vijaya Karnataka Web 20 Jul 2021, 2:24 pm
ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಎಐಟಿಸಿ) ಜುಲೈ 21 ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭಾಷಣವನ್ನು ಪ್ರಸಾರ ಮಾಡಲು ದೇಶದ ವಿವಿಧ ರಾಜ್ಯಗಳಲ್ಲಿ ದೈತ್ಯ ಪರದೆಗಳನ್ನು ಸ್ಥಾಪಿಸಲು ಯೋಜಿಸಿದೆ.ಈ ಕುರಿತು ನಿನ್ನೆ(ಜುಲೈ 19ಸೋಮವಾರ) ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಪಕ್ಷದ ಹಿರಿಯ ಮುಖಂಡ ಮದನ್ ಮಿತ್ರಾ, ಜುಲೈ 21 ರ ಮಮತಾ ಭಾಷಣವನ್ನು ದೇಶಾದ್ಯಂತ ನೇರ ಪ್ರಸಾರ ಮಾಡಲು ಪಕ್ಷ ನಿರ್ಧರಿಸಿದೆ ಎಂದು ಹೇಳಿದರು.ಟಿಎಂಸಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶ ಮಾಡಲಿದೆ. 2024ರ ಲೋಕಸಭೆ ಚುನಾವಣೆ ಬಳಿಕ ದೆಹಲಿಯಲ್ಲಿ ಮಮತಾ ನೇತೃತ್ವದ ಸರ್ಕಾರ ರಚಿಸುವುದು ನಮ್ಮ ಗುರಿ ಎಂದು ಮದನ್ ಮಿತ್ರಾ ಸ್ಪಷ್ಟಪಡಿಸಿದರು.
Loading ...