ಆ್ಯಪ್ನಗರ

ಮೋದಿ ಸರಕಾರದಿಂದ ಬೊಕ್ಕಸದ ಹಣ ದುರ್ಬಳಕೆ: ಮಮತಾ ಆರೋಪ

ರಫೇಲ್‌ ದಾಖಲೆಗಳು ಕಳವಾಗಿವೆ ಎಂಬ ಸರಕಾರದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕಡತಗಳನ್ನೇ ರಕ್ಷಿಸಲಾಗದ ಸರಕಾರ ಇನ್ನು ದೇಶವನ್ನು ಹೇಗೆ ರಕ್ಷಣೆ ಮಾಡುತ್ತದೆ ಎಂದು ಪ್ರಶ್ನಿಸಿದ್ದಾರೆ.

Vijaya Karnataka 8 Mar 2019, 9:00 pm
ಕೋಲ್ಕೊತಾ: ಕೇಂದ್ರದಲ್ಲಿರುವ ನರೇಂದ್ರ ಮೋದಿ ಸರಕಾರವು ಬೊಕ್ಕಸದ ಹಣವನ್ನು ಬಿಜೆಪಿ ಪಕ್ಷಕ್ಕಾಗಿ ಬಳಕೆ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌ ವರಿಷ್ಠೆ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
Vijaya Karnataka Web mamta


ಇದೇ ವೇಳೆ, ರಫೇಲ್‌ ದಾಖಲೆಗಳು ಕಳವಾಗಿವೆ ಎಂಬ ಸರಕಾರದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕಡತಗಳನ್ನೇ ರಕ್ಷಿಸಲಾಗದ ಸರಕಾರ ಇನ್ನು ದೇಶವನ್ನು ಹೇಗೆ ರಕ್ಷಣೆ ಮಾಡುತ್ತದೆ ಎಂದು ಪ್ರಶ್ನಿಸಿದ್ದಾರೆ. ಲೋಕಸಭಾ ಚುನಾವಣೆಗಾಗಿ ಇಲ್ಲಿ ಪಕ್ಷದ ಅಧಿಕೃತ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆ ಬಳಿಕ ದೇಶದಲ್ಲಿ ಹೊಸ, ಜನಪರ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪುಲ್ವಾಮಾ ದಾಳಿಗೆ ಭಾರತೀಯ ಸೇನೆಯ ಪ್ರತೀಕಾರದ ಬಗ್ಗೆ ಬಿಜೆಪಿ ನಾಯಕರ ಶ್ಲಾಘನೆಯನ್ನು ಖಂಡಿಸಿದ ಅವರು, ''ಹಾಲಿ ಸರಕಾರದ ಅವಧಿಯಲ್ಲಿ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ಸಂಬಂಧಿತ ಪ್ರಕರಣಗಳ ಸಂಖ್ಯೆ 260 % ಹೆಚ್ಚಾಗಿದೆ ಎಂದು ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ