ಆ್ಯಪ್ನಗರ

ಪಶ್ಚಿಮ ಬಂಗಾಳ: ಟಿಎಂಸಿ ನಾಯಕನ ಕಗ್ಗೊಲೆ, ಒಂದೇ ವಾರದಲ್ಲಿ ಎರಡನೇ ಹತ್ಯೆ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಹತ್ಯೆಯಾಗಿದೆ. ಕಳೆದ ಎರಡು ವಾರಗಳಿಂದ ನಡೆದ ಮೂರನೇ ಹತ್ಯೆ ಇದಾಗಿದೆ. ಕಳೆದ ಮೂರು ತಿಂಗಳಲ್ಲಿ ಪಶ್ಚಿಮ ಬಂಗಾಳದ 8 ಬಿಜೆಪಿ ಕಾರ್ಯಕರ್ತರನ್ನು ಸರಣಿ ಹತ್ಯೆ ನಡೆದಿದೆ.

Vijaya Karnataka Web 15 Oct 2019, 11:57 am
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕನನ್ನು ಅಪರಿಚಿತ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಿಡ್ನಾಪೂರ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
Vijaya Karnataka Web murder


ಬೈಕ್‌ ಕಳ್ಳತನ ಪ್ರಶ್ನಿಸಿದಾತನ ಕಗ್ಗೊಲೆ

ಹತ್ಯೆಗೀಡಾದ ವ್ಯಕ್ತಿ ಬಾಕ್ಚ ಗ್ರಾಮದ ಮಾಜಿ ಪಂಚಾಯಿತಿ ಅಧ್ಯಕ್ಷರಾಗಿದ್ದ ಬಾಸುದೇಬ್ ಮೊಂಡಾಲ್ ಎಂದು ಗುರುತಿಸಲಾಗಿದೆ. ಮಗಳ ಮನೆಯಿಂದ ಹಿಂತಿರುಗುತ್ತಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಈ ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಈ ಕೃತ್ಯಕ್ಕೆ ಹರಿತವಾದ ಆಯುಧ ಬಳಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪ್ರೇಮಿಯೊಟ್ಟಿಗೆ ಸೇರಿ ಪತಿಯನ್ನೇ ಕೊಲೆಗೈದ ಪ್ರಕರಣ : 24 ಗಂಟೆಯೊಳಗೆ ಆರೋಪಿಗಳ ಬಂಧನ

ಒಂದೇ ವಾರದಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಎರಡನೇ ಹತ್ಯೆ ಇದಾಗಿದೆ. ಭಾನುವಾರ ಸ್ಥಳೀಯ ಬಿಜೆಪಿ ಮುಖಂಡ ಹರಾಲ ದೇಬ್ ನಾಥ್ ರನ್ನು ಇಬ್ಬರು ಅಪರಿಚಿತರು ಗುಂಡಿಕ್ಕಿ ಹತ್ಯೆಗೈದಿದ್ದರು. ವಾರದ ಹಿಂದೆ ಬೊಂದು ಪ್ರಕಾಶ್ ಪಾಲ್ , ಆತನ ಗರ್ಭಿಣಿ ಪತ್ನಿ ಮತ್ತು 6 ವರ್ಷದ ಮಗನನ್ನು ಮುರ್ಷಿದಾಬಾದ್ ನಲ್ಲಿ ಕೊಲ್ಲಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ