ಆ್ಯಪ್ನಗರ

ಎಲ್ಲೆಡೆ ಮಳೆ ಅಬ್ಬರ

ಏತನ್ಮಧ್ಯೆ ನೆರೆ ಪೀಡಿತ ಕೇರಳದಲ್ಲಿ ಶನಿವಾರ ಮಳೆ ಪ್ರಮಾಣ ತಗ್ಗಿದ್ದು, ಸಹಜ ಸ್ಥಿತಿ ಮರು ಕಳಿಸತೊಡಗಿದೆ. ಆಂಧ್ರಪ್ರದೇಶದಲ್ಲೂ ಭಾರೀ ಮಳೆಯಾಗಿದೆ.

PTI 18 Aug 2019, 5:00 am
ಹೊಸದಿಲ್ಲಿ: ಉತ್ತರ ಭಾರತದಲ್ಲಿ ಮಳೆ ಆರ್ಭಟ ಮುಂದಿವರಿದಿದೆ. ಭಾಕ್ರಾ ಆಣೆಕಟ್ಟೆಗೆ ಭಾರೀ ಪ್ರಮಾಣದ ನೀರು ಬಿಡುಗಡೆಯಾಗಿದ್ದು ಪಂಜಾಬ್‌ನಲ್ಲಿ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಿಲ್ಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಸಮೀಪಿಸಿದೆ.
Vijaya Karnataka Web punjab-rains


ಅತ್ತ ಹಿಮಾಚಲ ಪ್ರದೇಶದಲ್ಲಿ ಮಳೆಯ ರಭಸಕ್ಕೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಾಂಗ್ರಾ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜಸ್ಥಾನದಲ್ಲೂ ಭಾರಿ ಮಳೆಯಾಗಿದೆ. ಅಜ್ಮೇರ್‌, ಜೋಧ್‌ಪುರ, ಬಿಕನೇರ್‌, ವನಸ್ಥಳಿ, ಭಿಲ್ವಾರ ಮತ್ತು ಸಿಕರ್‌ ಸೇರಿದಂತೆ ಅನೇಕ ಕಡೆಗಳಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು ನೂರಾರು ಜನರನ್ನು ಸ್ಥಳಾಂತರಿಸಲಾಗಿದೆ. ಕೋಲ್ಕೊತಾದಲ್ಲಿ ಕಳೆದ 24 ತಾಸುಗಳಲ್ಲಿ 186.1 ಮಿ.ಮೀ ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏತನ್ಮಧ್ಯೆ ನೆರೆ ಪೀಡಿತ ಕೇರಳದಲ್ಲಿ ಶನಿವಾರ ಮಳೆ ಪ್ರಮಾಣ ತಗ್ಗಿದ್ದು, ಸಹಜ ಸ್ಥಿತಿ ಮರು ಕಳಿಸತೊಡಗಿದೆ. ಆಂಧ್ರಪ್ರದೇಶದಲ್ಲೂ ಭಾರೀ ಮಳೆಯಾಗಿದೆ. ಇದರಿಂದ ಕೃಷ್ಣಾ ನದಿಯ ನೀರಿನ ಮಟ್ಟ ದಿಢೀರ್‌ ಏರಿಕೆಯಾಗಿದ್ದು 87 ಗ್ರಾಮಗಳು ಹಾಗೂ ನೂರಾರು ಎಕರೆ ಬೆಳೆ ಪ್ರದೇಶ ಮುಳುಗಡೆಯಾಗಿವೆ. ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಒಬ್ಬ ಬಾಲಕಿಯ ಶವವನ್ನು ಎನ್‌ಡಿಆರ್‌ಎಫ್‌ ತಂಡ ಶನಿವಾರ ಹೊರ ತೆಗೆದಿದೆ. ರಾಜ್ಯದಲ್ಲಿ ಇದುವರೆಗೆ ಮಳೆಗೆ ಇಬ್ಬರು ಬಲಿಯಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ