ಆ್ಯಪ್ನಗರ

ಗೋಸ್ಪರ್ಶದಿಂದ ನಕಾರಾತ್ಮಕ ಶಕ್ತಿ ದೂರ, ಮಹಾರಾಷ್ಟ್ರ ಸಚಿವೆಯ ಹೇಳಿಕೆಗೆ ವಿರೋಧ

ಗೋವನ್ನು ಸ್ಪರ್ಶಿಸುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂಬ ತಮ್ಮ ಹೇಳಿಕೆಗೆ ಬದ್ಧವಾಗಿರುವುದಾಗಿ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಹೇಳಿದ್ದಾರೆ.

Vijaya Karnataka Web 13 Jan 2020, 7:14 am
ಮುಂಬಯಿ: ಗೋವನ್ನು ಸ್ಪರ್ಶಿಸುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಎಂಬ ತಮ್ಮ ಹೇಳಿಕೆಗೆ ಬದ್ಧವಾಗಿರುವುದಾಗಿ ಮಹಾರಾಷ್ಟ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಯಶೋಮತಿ ಠಾಕೂರ್‌ ಹೇಳಿದ್ದಾರೆ.
Vijaya Karnataka Web yashomati thakur


ಶನಿವಾರ ಅಮರಾವತಿಯ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ''ಗೋವನ್ನು ಮುಟ್ಟಿದ್ದರೆ ನಮ್ಮಲ್ಲಿನ ನಕಾರಾತ್ಮಕತೆ ದೂರವಾಗುತ್ತದೆ ಎಂಬುದಾಗಿ ನಮ್ಮ ಸಂಸ್ಕೃತಿಯಲ್ಲೇ ಹೇಳಲಾಗಿದೆ,'' ಎಂದಿದ್ದರು. ಅದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು.

ಭಾನುವಾರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸಚಿವೆ, ''ಗೋವು ಅಂತಲೇ ಅಲ್ಲ, ಯಾವುದೇ ಪ್ರಾಣಿಯನ್ನು ನೀವು ಸ್ಪರ್ಶಿಸಿದರೂ ಸಕಾರಾತ್ಮಕ ಶಕ್ತಿ ಪ್ರವಹಿಸಿದ ಅನುಭವ ಉಂಟಾಗುತ್ತದೆ. ಅದರಲ್ಲಿಯೂ ಗೋವು ಪವಿತ್ರ ಪ್ರಾಣಿ. ನಾನು ಹೇಳಿದ್ದರಲ್ಲಿ ತಪ್ಪೇನಿದೆ?'' ಎಂದು ಪ್ರಶ್ನಿಸಿದ್ದಾರೆ.

ವಾಶಿಮ್‌ ಜಿಲ್ಲಾ ಪಂಚಾಯಿತಿ ಚುನಾವಣೆ ಪ್ರಚಾರದ ವೇಳೆ, ''ನಾವು ಈಗಷ್ಟೇ ಅಧಿಕಾರಕ್ಕೆ ಬಂದಿದ್ದೇವೆ. ನಮ್ಮ ಕಿಸೆಗಳು ಇನ್ನೂ ಭರ್ತಿಯಾಗಿಲ್ಲ,'' ಎನ್ನುವ ಮೂಲಕ ಯಶೋಮತಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ