ಆ್ಯಪ್ನಗರ

ಚೆನ್ನೈ ಸಮೀಪ ಹಳಿತಪ್ಪಿದ ಗೂಡ್ಸ್‌ ರೈಲು: ಕಂಟೈನರ್ ಉರುಳಿ ವ್ಯಕ್ತಿ ಸಾವು

ಚೆನ್ನೈನ ಅಂಬತ್ತೂರ್‌ನಲ್ಲಿ ಗೂಡ್ಸ್‌ ರೈಲು ಹಳಿ ತಪ್ಪಿದಾಗ, ಅದರ ಮೇಲಿದ್ದ ಕಂಟೈನರ್‌ ಉರುಳಿ ಹಳಿಯ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಬಿದ್ದು ಆತ ಮೃತಪಟ್ಟಿದ್ದಾನೆ.

TNN 2 Oct 2018, 12:24 pm
ಚೆನ್ನೈ: ಇಲ್ಲಿಗೆ ಸಮೀಪದ ಅಂಬತ್ತೂರ್‌ನಲ್ಲಿ ಗೂಡ್ಸ್‌ ರೈಲೊಂದು ಹಳಿ ತಪ್ಪಿದ್ದು, ಆಗ ಕಂಟೈನರ್‌ ಒಂದು ಉರುಳಿ ಹಳಿಯ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ.
Vijaya Karnataka Web goods train


ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕಟ್ಟಡ ನಿರ್ಮಾಣಕ್ಕೆ ಬಳಸಲಾಗುವ ಕಲ್ಲುಗಳನ್ನು ರೈಲಿನಲ್ಲಿ ಚೆನ್ನೈಗೆ ಸಾಗಿಸಲಾಗುತ್ತಿತ್ತು. ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಅಪಘಾತದ ಬಳಿಕ ಹಲವು ದೂರ ಸಂಚಾರದ ರೈಲುಗಳು ಮತ್ತು ಇಎಂಯು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚೆನ್ನೈ ಸೆಂಟರ್ಲ್‌ ರೈಲ್ವೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಥಾಮಸ್‌ ಯೇಸುದಾಸನ್‌ ಮತ್ತು ಅವರ ತಂಡ ಸ್ಥಳಕ್ಕೆ ಧಾವಿಸಿದೆ.

ರೈಲ್ವೆ ರಕ್ಷಣಾ ಪಡೆ ಮತ್ತು ಸರಕಾರಿ ರೈಲ್ವೇ ಪೊಲೀಸರು ಸ್ಥಳವನ್ನು ಸುತ್ತುವರಿದಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ