ಆ್ಯಪ್ನಗರ

ಸೂರತ್ ಮಾರುಕಟ್ಟೆ ಪ್ರವೇಶಕ್ಕೆ ತೃತೀಯ ಲಿಂಗಿಗಳಿಗೆ ಬಹಿಷ್ಕಾರ

ಕೊಲೆ ಆರೋಪದ ಹಿನ್ನೆಲೆಯಲ್ಲಿ ಸೂರತ್ ಮಾರುಕಟ್ಟೆ ಪ್ರವೇಶಿಸದಂತೆ ತೃತೀಯ ಲಿಂಗಿಗಳಿಗೆ ಬಹಿಷ್ಕಾರ ಹಾಕಿದ್ದಾರೆ.

TIMESOFINDIA.COM 27 Sep 2019, 2:59 pm
ಸೂರತ್: ಮಾರುಕಟ್ಟೆ ಪ್ರವೇಶಿಸದಂತೆ ತೃತೀಯ ಲಿಂಗಿಗಳಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಗುಜರಾತಿನ ಸೂರತ್‌ನಲ್ಲಿ ನಡೆದಿದೆ. ವ್ಯಕ್ತಿಯೋರ್ವನ ಕೊಲೆಗೆ ತೃತೀಯಲಿಂಗಿಗಳು ಕಾರಣರಾಗಿದ್ದಾರೆ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
Vijaya Karnataka Web tg


ತೃತೀಯ ಲಿಂಗಿಗಳು ಮಾರುಕಟ್ಟೆ ಪ್ರವೇಶ ಮಾಡುವಂತಿಲ್ಲ ಎಂದು ಸೂರತ್‌ನ ಮಾರುಕಟ್ಟೆಯಲ್ಲಿ ಫಲಕ ಕೂಡ ಹಾಕಲಾಗಿದೆ.

ಯಾರೋ ಒಬ್ಬರು ಮಾಡಿದ ಅಪರಾಧಕ್ಕೆ ಇಡೀ ಸಮುದಾಯಕ್ಕೆ ನಿಷೇಧ ಹೇರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ತೃತೀಯ ಲಿಂಗಿ ಪಾಯಲ್ ಕೌರ್ ಎಂಬವರು, ವಿಶೇಷ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಉತ್ತಮವಾಗಿ ಹಣ ಸಂಪಾದಿಸುತ್ತೇವೆ. ಆದರೆ, ಈಗ ಪ್ರವೇಶಕ್ಕೆ ನಿಷೇಧ ಹೇರಿರುವುದು ಹೊಟ್ಟೆ ಮೇಲೆ ಹೊಡೆದಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ತೃತೀಯ ಲಿಂಗಿಗಳು ಮಾರುಕಟ್ಟೆಗೆ ಆಗಮಿಸುವ ಜನರಿಗೆ ಕಿರುಕುಳು ನೀಡುತ್ತಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ತೃತೀಯ ಲಿಂಗಿಗಳಿಗೆ ಮಾರುಕಟ್ಟೆ ಪ್ರವೇಶ ನಿಷೇಧಿಸುವ ನಿರ್ಧಾರ ಕೈಗೊಂಡಿದ್ದೇವೆಂದು ಮಾರುಕಟ್ಟೆ ಜನರು ಹೇಳುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ