ಆ್ಯಪ್ನಗರ

ಮೋದಿಯನ್ನು ಎದುರಿಸಲು ಯಾರಿಂದಲೂ ಸಾಧ್ಯವಿಲ್ಲ: ನಿತೀಶ್‌

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯನ್ನು ಎದುರಿಸಲು ಯಾರೂ ಇಲ್ಲ ಎಂದು ಹೇಳಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 31 Jul 2017, 6:14 pm
ಪಾಟ್ನಾ: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯನ್ನು ಎದುರಿಸಲು ಯಾರೂ ಇಲ್ಲ ಎಂದು ಹೇಳಿದ್ದಾರೆ.
Vijaya Karnataka Web tried my best to save grand alliance but was left with no other choice
ಮೋದಿಯನ್ನು ಎದುರಿಸಲು ಯಾರಿಂದಲೂ ಸಾಧ್ಯವಿಲ್ಲ: ನಿತೀಶ್‌


ಈಗಿನ ಪ್ರಸಕ್ತ ರಾಜಕೀಯ ಸ್ಥಿತಿಯನ್ನು ನಾವು ಗಮನಿಸಿದರೆ 2019ರಲ್ಲಿ ಬರುವ ಚುನಾವಣೆಯಲ್ಲಿ ಪ್ರಧಾನಿಯಾಗಿ ಮೋದಿಯವರೇ ಮುಂದುವರಿಯುವ ಸಾಧ್ಯತೆಯೇ ಹೆಚ್ಚಿದ್ದು, ಇವರನ್ನು ಎದುರಿಸಲು ಸಾಮರ್ಥ್ಯವುಳ್ಳ ನಾಯಕನು ಯಾರೂ ಇಲ್ಲ ಎಂದಿದ್ದಾರೆ.

ಇದೇ ವೇಳೆ ಸಿಬಿಐ ದಾಳಿಗೆ ಸಂಬಂಧಿಸಿದಂತೆಯೂ ಮಾತನಾಡಿರುವ ನಿತೀಶ್ ಕುಮಾರ್, ಮಹಾಮೈತ್ರಿ ಕೂಟ ಮುಂದುವರಿಸಲು ಸಾಕಷ್ಟು ಪ್ರಯತ್ನ ನಡೆಸಿದ್ದೆ. ಸಿಬಿಐ ದಾಳಿ ನಡೆದಿರುವ ಬಗ್ಗೆ ಸ್ಪಷ್ಟನೆ ನೀಡಿ ಎಂದು ಲಾಲು ಪ್ರಸಾದ್‌ರನ್ನು ಕೇಳಿದ್ದೆ ಭ್ರಷ್ಟಾಚಾರದ ವಿಷಯ ಎದುರಾದಾಗ ನಾನು ಭ್ರಷ್ಟಾಚಾರವನ್ನು ಸಮರ್ಥಿಸುವುದಕ್ಕೆ ಸಾಧ್ಯವಿಲ್ಲ ಎನಿಸಿತ್ತು. ಅಲ್ಲದೇ ಮಾಧ್ಯಮದ ವರದಿ ಬಗ್ಗೆಯೂ ನಾನು ಕೇರ್‌ ಮಾಡಿರಲಿಲ್ಲ. ಆದರೆ ಎಲ್ಲರೂ ತನ್ನೆಡೆಗೆ ಬೊಟ್ಟು ಮಾಡಿದಾಗ ಆರೋಪಿ ಕುರಿತು ತನಿಖೆ ನಡೆಸಲೇಬೇಕಾಯಿತು. ಹೀಗಾಗಿ ಮಹಾಮೈತ್ರಿ ತೊರೆಯಲು ತೀರ್ಮಾನಿಸಿದೆ ಎಂದು ನಿತೀಶ್ ಹೇಳಿದ್ದಾರೆ.

ನಾನು ಎಲ್ಲವನ್ನೂ ಸಹಿಸಿಕೊಂಡೆ, ಕೊನೆಗೆ ನನಗೆ ಬೇರೆ ಯಾವುದೇ ಆಯ್ಕೆ ಇರಲಿಲ್ಲವಾಗಿತ್ತು. ಹಾಗಾಗಿ ಆರ್ ಜೆಡಿ ತೊರೆದು ಬಿಜೆಪಿ ಕೈಹಿಡಿಯಬೇಕಾಯಿತು ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ