ಆ್ಯಪ್ನಗರ

ಸತ್ಯವನ್ನು ಗೊಂದಲದಲ್ಲಿಡಬಹುದೇ ಹೊರತು ಸೋಲಿಸಲಾಗದು: ಸಚಿನ್ ಪೈಲಟ್ ಪ್ರತಿಕ್ರಿಯೆ!

ತಮ್ಮನ್ನು ರಾಜಸ್ಥಾನ ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿನ್ ಪೈಲಟ್, ಸತ್ಯವನ್ನು ಗೊಂದಲದಲ್ಲಿಡಬಹುದೇ ಹೊರತು ಸೋಲಿಸಲಾಗದು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.​​

Vijaya Karnataka Web 14 Jul 2020, 3:52 pm
ಜೈಪುರ್: ರಾಜಸ್ಥಾನದಲ್ಲಿ ಬಂಡಾಯವೆದ್ದ ಸಚಿನ್ ಪೈಲಟ್ ಅವರನ್ನು ಉಪ ಮುಖ್ಯಮಂತ್ರಿ ಹುದ್ದೆ ಹಾಗೂ ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲಾಗಿದೆ.

ಪಕ್ಷದ ಆದೇಶ ಧಿಕ್ಕರಿಸಿ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಪೈಲಟ್ ಅವರನ್ನು ಪಕ್ಷದಿಂದಲೂ ಉಚ್ಛಾಟಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಅದರ ಮೊದಲ ಭಾಗವಾಗಿ ಪೈಲಟ್ ಅವರನ್ನು ಡಿಸಿಎಂ ಹಾಗೂ ಪ್ರದೇಶ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿನ್ ಪೈಲಟ್, ಸತ್ಯವನ್ನು ಗೊಂದಲದಲ್ಲಿಡಬಹುದೇ ಹೊರತು ಸೋಲಿಸಲಾಗದು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಹುದ್ದೆಯಿಂದ ಸಚಿನ್ ಪೈಲಟ್‌ ಔಟ್: ಅಧ್ಯಕ್ಷ ಸ್ಥಾನವನ್ನೂ ಕಿತ್ತುಕೊಂಡ ಕಾಂಗ್ರೆಸ್!


ರಾಜಸ್ಥಾನ ಕಾಂಗ್ರೆಸ್‌ನಲ್ಲಾದ ಬೆಳವಣಿಗೆಗಳಿಗೆ ನಾನು ಕಾರಣ ಎಂದು ಬಿಂಬಿಸಲಾಗುತ್ತಿದ್ದು, ಅತೀ ಶೀಘ್ರದಲ್ಲೇ ಸತ್ಯ ಏನೆಂಬುದು ದೇಶದ ಜನತೆಗೆ ಗೊತ್ತಾಗಲಿದೆ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.

ಸತ್ಯವನ್ನು ಮರೆಮಾಚುತ್ತಿರುವ ಕಾಂಗ್ರೆಸ್‌ಗೆ ಅದನ್ನು ಸೋಲಿಸುವ ಶಕ್ತಿ ಇಲ್ಲ ಎಂದಿರುವ ಪೈಲಟ್, ಅಂತಿಮವಾಗಿ ಸತ್ಯಕ್ಕೆ ಜಯ ಲಭಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಎರಡನೇ ಬಾರಿಯು ಸಿಎಲ್‌ಪಿ ಮೀಟಿಂಗ್‌ಗೆ ಸಚಿನ್‌ ಪೈಲೆಟ್‌ ಗೈರು; ಬಂಡಾಯಕ್ಕೆ ಕಾಂಗ್ರೆಸ್‌ನಿಂದ ಶಿಸ್ತುಕ್ರಮ!

ಒಟ್ಟಿನಲ್ಲಿ ಸಚಿನ್ ಪೈಲಟ್ ಅವರನ್ನು ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ ಪರಿಣಾಮವಾಗಿ ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮತ್ತೊಂದು ತಿರುವು ಪಡೆದುಕೊಂಡಿದ್ದು, ಪೈಲಟ್ ಅವರ ಮುಂದಿನ ನಡೆ ಕುರಿತು ತೀವ್ರ ಕುತೂಹಲ ಮೂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ