ಹೊಸದಿಲ್ಲಿ: ಕಳೆದ ಐದು ವರ್ಷದ ಅವಧಿಯಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತ ಇಬ್ಬರು ಐಎಎಸ್ ಅಧಿಕಾರಿಗಳನ್ನು ವಜಾ ಮಾಡಲಾಗಿದೆ, ಒಂಬತ್ತು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಸಿಬ್ಬಂದಿ ಖಾತೆ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಬುಧವಾರ ಲೋಕಸಭೆಗೆ ತಿಳಿಸಿದರು. ಇದರ ಜತೆಗೆ 23 ಐಎಎಸ್ ಮತ್ತು ನಾಲ್ವರು ಐಪಿಎಸ್ ಅಧಿಕಾರಿಗಳ ವಿರುದ್ಧ 1988ರ ಭ್ರಷ್ಟಾಚಾರ ತಡೆ ಕಾಯಿದೆಯಡಿ ಖಟ್ಲೆ ಹೂಡಲು ಅನುಮತಿ ನೀಡಲಾಗಿದೆ. 2018-19ರ ಸಾಲಿನಲ್ಲಿ ಕೇಂದ್ರೀಯ ವಿಚಕ್ಷಣಾ ದಳಕ್ಕೆ 43,946 ದೂರುಗಳು ಬಂದಿದ್ದು, ಅವುಗಳ ಪೈಕಿ 41,755 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
11 ಅಧಿಕಾರಿಗಳ ವಿರುದ್ಧ ಕ್ರಮ
ಕಳೆದ ಐದು ವರ್ಷದ ಅವಧಿಯಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತ ಇಬ್ಬರು ಐಎಎಸ್ ಅಧಿಕಾರಿಗಳನ್ನು ವಜಾ ಮಾಡಲಾಗಿದೆ.
PTI 27 Jun 2019, 5:00 am