ಆ್ಯಪ್ನಗರ

ಮಧ್ಯ ಪ್ರದೇಶದ ಇಬ್ಬರು ಸಚಿವರ ರಾಜೀನಾಮೆ, ಚುನಾವಣೆಯಲ್ಲಿ ಸ್ಪರ್ಧೆ

​ಶಿವರಾಜ್‌ ಸಿಂಗ್‌ ಚೌಹಾಣ್‌ ಸರಕಾರದಲ್ಲಿ ಸಚಿವರಾಗಿ ​ತುಳಸಿರಾಮ್ ಮತ್ತು ಗೋವಿಂದ್‌ ರಜಪೂತ್‌ ಏಪ್ರಿಲ್‌ 21 ರಂದು ಅಧಿಕಾರ ಸ್ವೀಕರಿಸಿದ್ದರು. ಆದರೆ ಆರು ತಿಂಗಳಾದರೂ ವಿಧಾನಸಭೆಯ ಸದಸ್ಯರಾಗಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದಾರೆ.

Agencies 21 Oct 2020, 10:29 pm
ಭೋಪಾಲ್‌: ಮಧ್ಯಪ್ರದೇಶದ ಶಿವರಾಜ್‌ ಸಿಂಗ್‌ ಚೌಹಾಣ್‌ ಸಂಪುಟ ಸೇರಿ ಆರು ತಿಂಗಳಾದರೂ ವಿಧಾನಸಭೆಯ ಸದಸ್ಯರಾಗಲು ಸಾಧ್ಯವಾಗದ ಕಾರಣ ತುಳಸಿರಾಮ್‌ ಸಿಲಾವತ್‌ ಮತ್ತು ಗೋವಿಂದ್‌ ರಜಪೂತ್‌ ಅವರು ತಮ್ಮ ಸಚಿವ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
Vijaya Karnataka Web Shivraj Singh Chouhan
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌


ಈ ಇಬ್ಬರೂ ನವೆಂಬರ್‌ 3 ರಂದು ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಇದರಲ್ಲಿ ಆಯ್ಕೆಯಾದರೆ ಮತ್ತೆ ಸಚಿವರಾಗುವ ಸಾಧ್ಯತೆ ಇದೆ.

ಸಂವಿಧಾನದ ವಿಧಿ 164(4)ರ ಪ್ರಕಾರ ರಾಜ್ಯ ವಿಧಾನಸಭೆಯ ಸದಸ್ಯತ್ವವನ್ನು ಹೊಂದಿರದ ಸಚಿವರು ಅಧಿಕಾರ ಸ್ವೀಕರಿಸಿದ ಆರು ತಿಂಗಳ ಒಳಗೆ ವಿಧಾನಸಭೆ ಸದಸ್ಯತ್ವ ಪಡೆಯುವುದು ಕಡ್ಡಾಯ. ಅದು ಸಾಧ್ಯವಾಗದೇ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ನಡೆಯಬೇಕಾಗುತ್ತದೆ.

56 ವಿಧಾನಸಭೆ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ, ಮಧ್ಯಪ್ರದೇಶವೇ ಕೇಂದ್ರಬಿಂದು
ಶಿವರಾಜ್‌ ಸಿಂಗ್‌ ಚೌಹಾಣ್‌ ಸರಕಾರದಲ್ಲಿ ತುಳಸಿರಾಮ್‌ ಜಲ ಸಂಪನ್ಮೂಲ ಮತ್ತು ಗೋವಿಂದ್‌ ರಜಪೂತ್‌ ಸಾರಿಗೆ ಸಚಿವರಾಗಿದ್ದರು. ಇವರಿಬ್ಬರೂ ಏಪ್ರಿಲ್‌ 21 ರಂದು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.

ಜುಲೈ 2 ರಂದು ನಡೆದ ಸಂಪುಟ ವಿಸ್ತರಣೆಯಲ್ಲಿಯೂ ವಿಧಾನಸಭಾ ಸದಸ್ಯರಲ್ಲದ ಕೆಲವರನ್ನು ಸಚಿವರನ್ನಾಗಿ ಮಾಡಿಕೊಳ್ಳಲಾಗಿದೆ. ಸದ್ಯಕ್ಕೆ ಇವವರು ರಾಜೀನಾಮೆ ನೀಡಬೇಕಾಗಿಲ್ಲ. ಆದರೆ ಮುಂದೆಯೂ ಶಾಸಕರಾಗದೇ ಇದ್ದಲ್ಲಿ ರಾಜೀನಾಮೆ ನೀಡಬೇಕಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ