ಆ್ಯಪ್ನಗರ

ಶ್ರೀನಗರದಲ್ಲಿ ಗಸ್ತಿನಲ್ಲಿದ್ದ ಸೇನಾ ಪಡೆ ಮೇಲೆ ಉಗ್ರರ ದಾಳಿ, ಇಬ್ಬರು ಸೈನಿಕರು ಸಾವು

ಶ್ರೀನಗರದಿಂದ ಹಾದುಹೋಗಲಿದ್ದ ಭದ್ರತಾ ಪಡೆಗಳ ವಾಹನಗಳಿಗೆ ಭದ್ರತೆ ನೀಡಲು ಸೈನಿಕರ ತಂಡವನ್ನು ನಿಯೋಜಿಸಲಾಗಿತ್ತು. ಇವರು ಗಸ್ತು ತಿರುಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಮೂವರು ಭಯೋತ್ಪಾದಕರು ಏಕಾಏಕಿ ಸೈನಿಕರ ಮೇಲೆ ಗುಂಡಿನ ಮಳೆಗರೆದರು ಎಂದು ಪೊಲೀಸರು ವಿವರಿಸಿದ್ದಾರೆ.

Agencies 26 Nov 2020, 5:20 pm
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಎಚ್‌ಎಂಟಿ ಪ್ರದೇಶದ ಸಮೀಪ ಗಸ್ತು ತಿರುಗುತ್ತಿದ್ದ ಸೇನಾ ಪಡೆಗಳ ಮೇಲೆ ಗುರುವಾರ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಸೈನಿಕರು ಅಸುನೀಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Vijaya Karnataka Web Srinagar


ಭದ್ರತಾ ಪಡೆಗಳ ವಾಹನಗಳಿಗೆ ಭದ್ರತೆ ನೀಡಲು ಸೈನಿಕರ ತಂಡವನ್ನು ನಿಯೋಜಿಸಲಾಗಿತ್ತು. ಈ ವೇಳೆ ಮೂವರು ಭಯೋತ್ಪಾದಕರು ಏಕಾಏಕಿ ಸೈನಿಕರ ಮೇಲೆ ಗುಂಡಿನ ಮಳೆಗರೆದರು. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೈನಿಕರು ನಂತರ ಸಾವನ್ನಪ್ಪಿದರು ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗುಂಡಿನ ದಾಳಿಯ ನಂತರ ಮೂವರೂ ಕಾರಿನಲ್ಲಿ ಓಡಿ ಹೋಗಿದ್ದಾರೆ. ಇವರಲ್ಲಿ ಇಬ್ಬರು ಪಾಕಿಸ್ತಾನಿಯರಾಗಿದ್ದು, ಒಬ್ಬರು ಸ್ಥಳೀಯರಾಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಭಾಗದಲ್ಲಿ ಜೈಷ್‌ ಎ ಮೊಹಮ್ಮದ್‌ ಸಕ್ರಿಯವಾಗಿದ್ದು, ಸಂಜೆ ಮೊದಲು ಈ ಘಟನೆ ಹಿಂದಿರುವ ಸಂಘಟನೆ ಯಾವುದು ಎಂಬುದನ್ನು ಪತ್ತೆ ಹಚ್ಚುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ತಲೆ ಮರೆಸಿಕೊಂಡಿರುವ ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಕೆಲವೇ ದಿನದ ಹಿಂದೆ ಟ್ರಕ್‌ನಲ್ಲಿ ಅಡಗಿಕೊಂಡಿದ್ದ ನಾಲ್ವರು ಜೈಷ್‌ ಎ ಮೊಹಮ್ಮದ್‌ ಉಗ್ರರನ್ನು ಜಮ್ಮು ಮತ್ತು ಶ್ರೀನಗರ ಹೆದ್ದಾರಿಯಲ್ಲಿ ಹೊಡೆದುರುಳಿಸಲಾಗಿತ್ತು. ಇದಾದ ಬಳಿಕ ಈ ದಾಳಿ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ