ಆ್ಯಪ್ನಗರ

ಫೀಸು ಕಟ್ಟಿಲ್ಲವೆಂದು ಕಣ್ಣು ಕಾಣದ ವಿದ್ಯಾರ್ಥಿಯನ್ನು ಬಿಸಿಲಿನಡಿ ನಿಲ್ಲಿಸಿದ ದುರುಳರು

ಇತ್ತೀಚೆಗೆ ಡೆಹರಾಡೂನ್‌ ಬೋರ್ಡಿಂಗ್‌ ಶಾಲೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಯಿಂದ ಕೊಲ್ಲಲ್ಪಟ್ಟಿದ್ದ 12 ವರ್ಷದ ವಿದ್ಯಾರ್ಥಿಯ ಶವವನ್ನು ಶಾಲೆಯ ಆವರಣದಲ್ಲೇ ಹೂತುಹಾಕಿ ಪ್ರಕರಣವನ್ನು ಮುಚ್ಚಿಹಾಕಲು ಶಾಲೆಯ ಆಡಳಿತ ಮಂಡಳಿ ಪ್ರಯತ್ನಿಸಿತ್ತು. ಪೋಷಕರಿಗೆ ವಿಚಾರವನ್ನು ತಲುಪಿಸದೆ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು.

Indiatimes 31 Mar 2019, 3:24 pm
ಕೊಚ್ಚಿ: ಕೇರಳದ ಶಾಲೆಯೊಂದರಲ್ಲಿ ಇಬ್ಬರು ಪ್ರಾಥಮಿಕ ವಿದ್ಯಾರ್ಥಿಗಳನ್ನು ಶಾಲೆಯ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಬಿಸಿಲಿನಲ್ಲಿ ನಿಲ್ಲುವ ಶಿಕ್ಷೆಯನ್ನು ವಿಧಿಸಿದ ದಾರುಣ ಘಟನೆ ನಡೆದಿದೆ. ವಿದ್ಯಾರ್ಥಿಗಳ ಪೈಕಿ ಓರ್ವ ದೃಷ್ಟಿಯ ಸಮಸ್ಯೆ ಎದುರಿಸುತ್ತಿದ್ದಾನೆ.
Vijaya Karnataka Web Kerala Student


ವಿಚಾರ ಬಹಿರಂಗವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಕೇರಳ ರಾಜ್ಯ ಮಕ್ಕಳ ಹಕ್ಕು ಆಯೋಗವು ಶಾಲೆಯ ಆಡಳಿತ ಮಂಡಳಿ ವಿರುದ್ಧ ಶನಿವಾರ ಕೇಸು ದಾಖಲಿಸಿದ್ದಾರೆ.

ಬಿಸಿಲಿನಲ್ಲಿ ಗಂಟೆಗಳ ಕಾಲ ನಿಂತ ನಂತರ ಓರ್ವ ವಿದ್ಯಾರ್ಥಿ ಕುಸಿದು ಬಿದ್ದಿದ್ದಾನೆ. ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ಅಲುವಾ ಸಮೀಪದ ಕರುಮಲ್ಲೋರ್‌ನ ಯುನೈಟೆಡ್‌ ಸ್ಕೂಲ್‌ನಲ್ಲಿ ನಡೆದ ಘಟನೆಯಾಗಿದೆ. 2ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ವರ್ಷದ ಕೊನೆಯ ಅವಧಿಯ ಶುಲ್ಕ ಕಟ್ಟಿರಲಿಲ್ಲ. ಆದ್ದರಿಂದ ಇಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡದೆ ಬಿಸಲಲ್ಲಿ ನಿಲ್ಲಿಸಿದ್ದಾರೆ ಎಂದು ರಾಜ್ಯ ಮಕ್ಕಳು ಹಕ್ಕುಗಳ ಆಯೋಗ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಬಿಸಿಲಲ್ಲಿ ನಿಲ್ಲುವ ಶಿಕ್ಷೆ ವಿಧಿಸಿದ ಶಾಲೆಯ ವಿರುದ್ಧ ಕೇರಳ ಮಾನವ ಹಕ್ಕುಗಳ ಆಯೋಗವು ಪ್ರತ್ಯೇಕ ದೂರು ದಾಖಲಿಸಿದೆ.

ಇತ್ತೀಚೆಗೆ ಡೆಹರಾಡೂನ್‌ ಬೋರ್ಡಿಂಗ್‌ ಶಾಲೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಯಿಂದ ಕೊಲ್ಲಲ್ಪಟ್ಟಿದ್ದ 12 ವರ್ಷದ ವಿದ್ಯಾರ್ಥಿಯ ಶವವನ್ನು ಶಾಲೆಯ ಆವರಣದಲ್ಲೇ ಹೂತುಹಾಕಿ ಪ್ರಕರಣವನ್ನು ಮುಚ್ಚಿಹಾಕಲು ಶಾಲೆಯ ಆಡಳಿತ ಮಂಡಳಿ ಪ್ರಯತ್ನಿಸಿತ್ತು. ಪೋಷಕರಿಗೆ ವಿಚಾರವನ್ನು ತಲುಪಿಸದೆ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ