ಆ್ಯಪ್ನಗರ

ರಾಷ್ಟ್ರೀಕೃತ ಬ್ಯಾಂಕ್‌ ಸಾಲಮನ್ನಾ ಮಾಡುವ ಇರಾದೆ ಕೇಂದ್ರಕ್ಕೆ ಇದೆಯೇ?: ಮುದ್ದ ಹನುಮೇಗೌಡ

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡುವ ಯೋಚನೆ ಸರಕಾರಕ್ಕೆ ಇದೆಯೇ ಎಂಬ ಪ್ರಶ್ನೆಗೆ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಹಾರಿಕೆ ಉತ್ತರ ನೀಡಿದ್ದಾರೆ.

Vijaya Karnataka Web 31 Jul 2018, 7:04 pm
ಹೊಸದಿಲ್ಲಿ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡುವ ಯೋಚನೆ ಸರಕಾರಕ್ಕೆ ಇದೆಯೇ ಎಂಬ ಪ್ರಶ್ನೆಗೆ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಹಾರಿಕೆ ಉತ್ತರ ನೀಡಿದ್ದಾರೆ.
Vijaya Karnataka Web lok sabha


ಚರ್ಚೆಯಲ್ಲಿ ಪಾಲ್ಗೊಂಡ ತುಮಕೂರು ಲೋಕಸಭಾ ಸದಸ್ಯ ಎಸ್.ಪಿ.ಮುದ್ದಹನುಮೇಗೌಡ, ರೈತರ ನೋವನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ರೈತರ ಆತ್ಮಹತ್ಯೆಯ ನಿಲ್ಲಿಸಲು ಸಾಕಷ್ಟು ಕ್ರಮ ಕೈಗೊಂಡರೂ ಆತ್ಮಹತ್ಯೆ ನಿಂತಿಲ್ಲ. ಕರ್ನಾಟಕದಲ್ಲಿ ಕುಮಾರಸ್ವಾಮಿ ಸರಕಾರ 44 ಸಾವಿರ ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡಿದೆ. ಈ ಹಿಂದೆ ಇದ್ದ ಸಿದ್ದರಾಮಯ್ಯ ಸರಕಾರ ಎಂಟು ಸಾವಿರ ಕೋಟಿ ರೂ ರೈತರ ಸಾಲ‌ಮನ್ನಾ ಮಾಡಿತ್ತು‌. ರೈತರ ಆತ್ಮಹತ್ಯೆಗೆ ಬ್ಯಾಂಕ್ ಸಾಲ ಕಾರಣ ಆಗಿರುವುದರಿಂದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲವನ್ನು ಮನ್ನಾ ಮಾಡುವ ಆಲೋಚನೆ ಕೇಂದ್ರಕ್ಕೆ ಇದೆಯೇ ಎಂದು ಅವರು ಕೇಳಿದ್ದಾರೆ.

ಇದಕ್ಕೆ ಉತ್ತರಿಸಿದ ಸಚಿವ ರಾಧಾ ಮೋಹನ್‌ ಸಿಂಗ್‌ ಕೇಂದ್ರ ಸರ್ಕಾರವು ರೈತರ ಕಲ್ಯಾಣ ಕ್ಕೆ ಅನೇಕ ಕ್ರಮ ಕೈಗೊಂಡಿದೆ.‌ ಸಾಕಷ್ಟು ಯೋಜನೆ ಜಾರಿಗೊಳಿಸಿದೆ ಎಂದಷ್ಟೇ ಹೇಳಿ ಸುಮ್ಮನಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ