ಹೊಸದಿಲ್ಲಿ: ಭಾರತೀಯ ಕ್ರಿಕೆಟ್ ತಂಡದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಮೀಸಲಾತಿ ನೀಡಿದರೆ ಉತ್ತಮ ನಿರ್ವಹಣೆ ಸಾಧ್ಯವಿದೆ ಎಂದು ಕೇಂದ್ರ ಸಮಾಜ ಕಲ್ಯಾಣ ಖಾತೆ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.
ನಾಗಪುರದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಪಾಕಿಸ್ತಾನದ ವಿರುದ್ಧದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಲು ವಿರಾಟ್ ಕೊಹ್ಲಿ ಮತ್ತು ಯುವರಾಜ್ ಸಿಂಗ್ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದೇ ಕಾರಣ ಎಂದರಲ್ಲದೆ, ಬಿಸಿಸಿಐ ಪರಿಶಿಷ್ಟ ಕ್ರೀಡಾಳುಗಳಿಗೆ ಸಮಾನ ಪ್ರಾತಿನಿಧ್ಯ ನೀಡಬೇಕು ಎಂದರು.
ಕ್ರಿಕೆಟ್ ತಂಡದಲ್ಲಿ ಪರಿಶಿಷ್ಟ ಜಾತಿ/ವರ್ಗಕ್ಕೆ ಶೆ. 25ರಷ್ಟು ಮೀಸಲಾತಿ ನೀಡಿದರೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.