ಆ್ಯಪ್ನಗರ

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ ಸೋಂಕು ದೃಢ..!

ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವ ಬಗ್ಗೆ ಟ್ವಿಟರ್ ಮೂಲಕ ದೃಢಪಡಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ನಾನು ಸಾಮಾನ್ಯವಾಗಿ ಯಾವುದೇ ಘೋಷಣೆಗಳನ್ನು ಮಾಡೋವಾಗ ಪದಗಳಿಗಾಗಿ ತಡಕಾಡೋದು ವಿರಳ. ಆದರೆ ಈಗ ಸರಳವಾಗಿ ಹೇಳುತ್ತಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

Vijaya Karnataka Web 29 Oct 2020, 9:48 am
ಹೊಸದಿಲ್ಲಿ: ಕೊರೊನಾ ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹರಡುತ್ತಿದ್ದು ಇನ್ನೂ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಇಲ್ಲಿಯತನಕ ಭಾರತದಲ್ಲಿ ಲಕ್ಷಾಂತರ ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.
Vijaya Karnataka Web smriti-irani-toi.


ಇದೀಗ ಆ ಸಾಲಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದ್ದಾರೆ. ಕೇಂದ್ರ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಖಾತೆಯ ಸಚಿವೆಯಾಗಿರುವ ಸ್ಮೃತಿ ಇರಾನಿ ಅವರಿಗೆ ಬುಧವಾರ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಈ ಕುರಿತು ಅವರೇ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಸಾಮಾನ್ಯವಾಗಿ ಯಾವುದೇ ಘೋಷಣೆಗಳನ್ನು ಮಾಡೋವಾಗ ಪದಗಳಿಗಾಗಿ ತಡಕಾಡೋದು ವಿರಳ. ಆದರೆ ಈಗ ಸರಳವಾಗಿ ಹೇಳುತ್ತಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ಗೆ ಕೊರೊನಾ ಪಾಸಿಟಿವ್‌ ದೃಢ..!

ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವ ಹಿನ್ನೆಲೆ ವೈದ್ಯರ ಸಲಹೆ ಪಡೆದಿರುವ ಸ್ಮೃತಿ ಇರಾನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ಏರುಪೇರು ಕಾಣಿಸಿಕೊಂಡಿಲ್ಲ. ದೇಹದಲ್ಲಿ ಕೊರೊನಾ ಪಾಸಿಟಿವ್ ಗುಣಲಕ್ಷಣಗಳು ಅಷ್ಟೇ ಕಾಣಿಸಿಕೊಂಡಿವೆ ಎಂದು ತಿಳಿದುಬಂದಿದೆ.
‘ನಮ್ಮ ಹಿಂದುತ್ವ ಪ್ರಶ್ನಿಸುವ ನೀವು ಸಾವರ್ಕರ್‌ಗೆ ಯಾಕೆ ಇನ್ನೂ ಭಾರತರತ್ನ ನೀಡಿಲ್ಲ’; ಬಿಜೆಪಿ ವಿರುದ್ಧ ಶಿವಸೇನೆ ಕಿಡಿಇತ್ತೀಚೆಗೆ ರಾಜಕಾರಣಿಗಳಲ್ಲಿ ಹೆಚ್ಚಾಗಿ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿದ್ದು, ಜನರ ಜೊತೆ ಸಂಪರ್ಕದಲ್ಲಿರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ರಾಮ್‌ದಾಸ್‌ ಅಠಾವಳೆ ಅವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ