ಆ್ಯಪ್ನಗರ

ಕೋರ್ಟ್‌ಗೆ ಆಗಮಿಸುತ್ತಿದ್ದ ಉನ್ನಾವ್‌ ರೇಪ್‌ ಸಂತ್ರಸ್ತೆ ಮೇಲೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಉನ್ನಾವ್‌ ಸಾಮೂಹಿಕ ಅತ್ಯಾಚಾರ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈಗ ಸಂತ್ರಸ್ತೆಯ ಮೇಲೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದು ಭಾರಿ ಆತಂಕಕ್ಕೆ ಕಾರಣವಾಗಿದೆ.

Vijaya Karnataka Web 5 Dec 2019, 4:06 pm
ಲಖನೌ: ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಮತ್ತೊಂದು ಭೀಕರ ಘಟನೆ ನಡೆದಿದೆ.
Vijaya Karnataka Web ಉನ್ನಾವ್‌
ಉನ್ನಾವ್‌


ಉನ್ನಾವ್‌ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರಾಗಲ ಆಗಮಿಸುತ್ತಿದ್ದ ಸಂದಭದಲ್ಲೇ ಈ ಘಟನೆ ನಡೆದಿರುವುದು ಭಾರಿ ಆತಂಕ ಮೂಡಿಸಿದೆ.

ಗುರುವಾರ ಬೆಳಗ್ಗೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಸಂತ್ರಸ್ತೆ ಆಗಮಿಸಬೇಕಾಗಿತ್ತು. ರಾಯಬರೇಲಿಗೆ ಬರಲು ರೈಲು ನಿಲ್ದಾಣಕ್ಕೆ ಬೆಳಗಿನ ಜಾವ 4.30ಕ್ಕೆ ಆಗಮಿಸಿದ ಸಂತ್ರಸ್ತೆಯನ್ನು ಗೌರಾ ಕ್ರಾಸಿಂಗ್‌ನಲ್ಲಿ ದುಷ್ಕರ್ಮಿಗಳು ತಡೆಹಿಡಿದರು.

ಕೂಡಲೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೂಡಲೇ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆಕೆಯ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿರುವ ಮಾಹಿತಿ ಪ್ರಕಾರ ಆರು ಮಂದಿ ದುಷ್ಕಮಿಗಳು ಅಡ್ಡಗಟ್ಟಿ ತಲೆಗೆ ಹೊಡೆದಿದ್ದಾರೆ. ನಂತರ ಕುತ್ತಿಗೆಯನ್ನು ಕತ್ತಿಯಿಂದ ತಿವಿದಿದ್ದಾರೆ. ಆಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

ಈ ಎಲ್ಲ ಮಾಹಿತಿಯನ್ನು ಸಂತ್ರಸ್ತೆ ಪೊಲೀಸರಿಗೆ ನೀಡಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರ ಪ್ರಕರಣದ ಇಬ್ಬರು ಆರೋಪಿಗಳು ಇದರಲ್ಲಿ ಇದ್ದರು ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. 112ಕ್ಕೆ ಕರೆ ಮಾಡಿದ ಕೂಡಲೇ ಪೊಲೀಸರು ಬಂದು ಪರಿಶೀಲನೆ ನಡೆಸಿದರು.

ನಂತರ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಶೋಧ ನಡೆಯುತ್ತಿದೆ.

ಉನ್ನಾವ್‌ ಅತ್ಯಾಚಾರ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. 2017ರಲ್ಲಿ ಉತ್ತರ ಪ್ರದೇಶದಲ್ಲಿ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಈ ಘಟನೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕರ ಹೆಸರು ಕೇಳಿಬಂದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ