ಆ್ಯಪ್ನಗರ

ತ್ವರಿತಗತಿಯ ನ್ಯಾಯಾಲಯದಿಂದ ಉನ್ನಾವೋ ಪ್ರಕರಣದ ವಿಚಾರಣೆ: ಯೋಗಿ ಆದಿತ್ಯನಾಥ್‌

ಉನ್ನಾವೋ ಅತ್ಯಾಚಾರ ಪ್ರಕರಣದ “ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣವನ್ನು ತ್ವರಿತಗತಿಯ ನ್ಯಾಯಾಲಯದಿಂದ ವಿಚಾರಣೆ ನಡೆಸಿ, ಶಿಕ್ಷೆ ನೀಡಲಾಗುವುದು,” ಎಂಬುದಾಗಿ ಯೋಗಿ ಆದಿತ್ಯನಾಥ್‌ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vijaya Karnataka 7 Dec 2019, 4:19 pm

ಲಖನೌ: ಉನ್ನಾವೋ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಸಾವು ತೀವ್ರ ನೋವು ತಂದಿದೆ ಎಂದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಕುಟುಂಬಕ್ಕೆ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.
Vijaya Karnataka Web Yogi Adityanath


“ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣವನ್ನು ತ್ವರಿತಗತಿಯ ನ್ಯಾಯಾಲಯದಿಂದ ವಿಚಾರಣೆ ನಡೆಸಿ, ಶಿಕ್ಷೆ ನೀಡಲಾಗುವುದು,” ಎಂಬುದಾಗಿ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗುರುವಾರ ಮುಂಜಾನೆ ರಾಯ್‌ಬರೇಲಿ ನ್ಯಾಯಾಲಯಕ್ಕೆ ವಿಚಾರಣೆಗೆಂದು ತೆರಳುತ್ತಿದ್ದ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ಐವರು ಬೆಂಕಿ ಹಚ್ಚಿದ್ದರು. ಇವರಲ್ಲಿ ಇಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದವರು ಎಂಬ ಅನುಮಾನಗಳಿವೆ.

ದುಷ್ಕರ್ಮಿಗಳನ್ನು ಬಿಡಬೇಡಿ, ಗಲ್ಲಿಗೇರಿಸಿ: ಉನ್ನಾವ್‌ ರೇಪ್‌ ಸಂತ್ರಸ್ತೆ ಕೊನೆಯಾಸೆ

ಶೇಕಡಾ 90ರಷ್ಟು ಸುಟ್ಟ ಗಾಯಕ್ಕೆ ಒಳಗಾಗಿದ್ದ ಆಕೆಯನ್ನು ಏರ್‌ ಆಂಬುಲೆನ್ಸ್‌ ಮೂಲಕ ದೆಹಲಿಯ ಸಫ್ದರ್‌ಜಂಗ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಹೀಗಿದ್ದೂ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಆಕೆ ಸಾವನ್ನಪ್ಪಿದ್ದಾರೆ. ಸಾವಿನ ಬಳಿಕ ಆಕೆಯ ಮೃತ ದೇಹವನ್ನು ಆಸ್ಪತ್ರೆಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಆಕೆಯ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಪ್ರಕರಣದ ಬಗ್ಗೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಯೋಗಿ ಆದಿತ್ಯನಾಥ್‌ ವಿರುದ್ಧ ವಿರೋಧ ಪಕ್ಷಗಳು ಕಿಡಿಕಾರಿವೆ. ಇದರ ನಡುವೆ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗುವಂತೆ ತಮ್ಮ ಸಂಪುಟದ ಕಮಲ್‌ ರಾಣಿ ವರುಣ್‌ ಮತ್ತು ಸ್ವಾಮಿ ಪ್ರಸಾದ್‌ ಮೌರ್ಯ ಅವರಿಗೆ ಆದಿತ್ಯನಾಥ್‌ ಸೂಚಿಸಿದ್ದಾರೆ. ಸಿಎಂ ಸೂಚನೆ ಮೇರೆಗೆ ಉನ್ನಾವೋಗೆ ತೆರಳಿದ ಸಚಿವರಿಗೆ ಸ್ಥಳದಲ್ಲಿ ತೀವ್ರ ಪ್ರತಿಭಟನೆ ಎದುರಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ