ಆ್ಯಪ್ನಗರ

ಸಿಎಂ ಧರಣಿ ಕೂರುವುದು ಪ್ರಜಾಪ್ರಭುತ್ವಕ್ಕೆ ಅವಮಾನ: ಯೋಗಿ ಆದಿತ್ಯನಾಥ್

ಹಗರಣವೊಂದನ್ನು ಮುಚ್ಚಿಹಾಕಲು ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಲು ಸ್ವತಃ ರಾಜ್ಯದ ಸಿಎಂ ಮುಂದಾಗುತ್ತಾರೆ ಎಂದಾದರೆ ಅದು ನಿಜಕ್ಕೂ ನಾಚಿಕೆಗೇಡು.

Vijaya Karnataka Web 5 Feb 2019, 6:24 pm
ಕೋಲ್ಕತಾ: ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಧರಣಿ ಕೂರುವುದು ಪ್ರಜಾಪ್ರಭುತ್ವಕ್ಕೆ ಅವಮಾನವೆಸಗಿದಂತೆ, ಅದು ನಾಚಿಕೆಗೇಡು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
Vijaya Karnataka Web Yogi


ಪಶ್ಚಿಮ ಬಂಗಾಳದ ಪುರುಲಿಯದಲ್ಲಿ ಮಂಗಳವಾರ ಸಂಜೆ ರ‍್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಯೋಗಿ, ಒಬ್ಬ ಭ್ರಷ್ಟ ಅಧಿಕಾರಿಯನ್ನು, ಹಗರಣವೊಂದನ್ನು ಮುಚ್ಚಿಹಾಕಲು ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಲು ಸ್ವತಃ ರಾಜ್ಯದ ಸಿಎಂ ಮುಂದಾಗುತ್ತಾರೆ ಎಂದಾದರೆ ಅದು ನಿಜಕ್ಕೂ ನಾಚಿಕೆಗೇಡು. ಶಾರದಾ ಚಿಟ್ ಫಂಡ್ ಹಗರಣದಲ್ಲಿ ಕೋಟ್ಯಂತರ ರೂ. ವಂಚನೆ ನಡೆದಿದ್ದರೂ, ಪೊಲೀಸ್ ಆಯುಕ್ತ ರಾಜೀವ್ ಕುಮಾರ್‌ರನ್ನು ರಕ್ಸಿಲು ಮಮತಾ ಮುಂದಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಬದಲಾವಣೆ ತರಲು ಬಯಸಿದ್ದಾರೆ. ಭ್ರಷ್ಟಕೂಟದಿಂದ ಬಂಗಾಳದ ಜನರನ್ನು ನಾವು ರಕ್ಷಿಸಬೇಕಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ, ಹಗರಣದಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ಬಂಧಿಸಿ, ವಿಚಾರಣೆ ನಡೆಸಲಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಮಮತಾ ಸರಕಾರ ಯೋಗಿ ಆದಿತ್ಯನಾಥ್ ಅವರಿಗೆ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಲು ಅನುಮತಿ ನಿರಾಕರಿಸಿ ವಿವಾದ ಎಬ್ಬಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ