ಆ್ಯಪ್ನಗರ

ಅಸಭ್ಯ ವರ್ತನೆ ಆರೋಪ: ಪ್ರಿಯಾಂಕಾ ಗಾಂಧಿ ಕ್ಷಮೆ ಕೇಳಿದ ಯುಪಿ ಪೊಲೀಸ್!

ಹತ್ರಾಸ್ ಸಂಭವನೀಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ವೇಳೆ, ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪೊಲೀಸರು ನಡೆಸಿದ್ದಾರೆ ಎನ್ನಲಾದ ಅನುಚಿತ ವರ್ತನೆಗೆ ಯುಪಿ ಪೊಲೀಸ್ ಕ್ಷಮೆ ಕೇಳಿದೆ.

Vijaya Karnataka Web 5 Oct 2020, 10:02 am
ನೋಯ್ಡಾ: ಹತ್ರಾಸ್ ಸಂಭವನೀಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ವೇಳೆ, ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪೊಲೀಸರು ನಡೆದುಕೊಂಡಿದ್ದಾರೆ ಎನ್ನಲಾದ ರೀತಿ ಭಾರೀ ವಿವಾದಕ್ಕೆ ಕಾರಣವಾಗಿದೆ.
Vijaya Karnataka Web Priyanka Gandhi
ಸಂಗ್ರಹ ಚಿತ್ರ


ಪ್ರತಿಭಟನೆ ವೇಳೆ ಪ್ರಿಯಾಂಕಾ ಗಾಂಧಿ ಅವರನ್ನು ತಡೆದ ಪೊಲೀಸರು, ಅವರ ಬಟ್ಟೆ ಹಿಡಿದು ಎಳೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಘಟನೆ ಕುರಿತು ಆಂತರಿಕ ಘಟನೆಗೆ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಇದೇ ವೇಳೆ ಘಟನೆಗೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರಲ್ಲಿ ಕ್ಷಮೆ ಕೋರಿರುವ ಗೌತಮ ಬುದ್ಧನಗರ್ ಪೊಲೀಸರು, ಪ್ರತಿಭಟನೆಯಲ್ಲಿ ನಡೆದ ಅಚಾತುರ್ಯಕ್ಕೆ ಕ್ಷಮೆ ಇರಲಿ ಎಂದು ಮನವಿ ಮಾಡಿದ್ದಾರೆ.

ಪೊಲೀಸರು ನನ್ನ ಮೇಲೆ ಲಾಠಿ ಬೀಸಿ ದೂರ ತಳ್ಳಿದರು: ಹತ್ರಾಸ್ ಸಂತ್ರಸ್ತರತ್ತ ತೆರಳುತ್ತಿದ್ದ ರಾಹುಲ್ ಆರೋಪ!

ಎಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಮಹಿಳೆಯರೊಂದಿಗಿನ ಅನುಚಿತ ವರ್ತನೆಯನ್ನು ಸಹಿಸಲಾಗದು ಎಂದಿರುವ ಯುಪಿ ಪೊಲೀಸ್ ಇಲಾಖೆ, ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ.

ಕಳೆದ ಅಕ್ಟೋಬರ್ 1 ರಂದು ಹತ್ರಾಸ್‌ನತ್ತ ತೆರಳುತ್ತಿದ್ದ ಕಾಂಗ್ರೆಸ್ ಪಾದಯಾತ್ರೆಯನ್ನು ಯಮುನಾ ಎಕ್ಸ್‌ಪ್ರೆಸ್ ಹೈವೇಯಲ್ಲಿ ತಡೆದಿದ್ದ ಪೊಲೀಸರು, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ತಡೆದಿದ್ದರು.

ಈ ವೇಳೆ ರಾಹುಲ್ ಗಾಂಧಿ ಅವರನ್ನು ನೂಕಿ ಬೀಳಿಸಿದ್ದ ಪೊಲೀಸರು, ಪ್ರಿಯಾಂಕಾ ಗಾಂಧಿ ಅವರ ಬಟ್ಟೆ ಹಿಡಿದು ಎಳೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಹೆದ್ದಾರಿಯಲ್ಲಿ ಹತ್ರಾಸ್ ಹೈಡ್ರಾಮಾ: ರಾಹುಲ್ VS ಯುಪಿ ಪೊಲೀಸ್!

ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಕ್ಷಮೆ ಕೋರಿರುವ ಯುಪಿ ಪೊಲೀಸರು, ಆಂತರಿಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ