ಲಖನೌ: ಮಹತ್ವದ ಬೆಳವಣಿಗೆಯೊಂದರಲ್ಲಿ ಮದುವೆ ಕಾರಣಕ್ಕೆ ಒತ್ತಾಯದ ಮತಾಂತರ ಪ್ರಕರಣಗಳನ್ನು ತಡೆಗಟ್ಟಲು, ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದೆ.
ಲವ್ ಜಿಹಾದ್ ಎಂದು ಕರೆಯಲಾಗುವ ಒತ್ತಾಯದ ಮತಾಂತರ ಪ್ರಕರಣಗಳನ್ನು ತಡೆಗಟ್ಟಲು, ಸುಗ್ರೀವಾಜ್ಷೆಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಉತ್ತರಪ್ರದೇಶ ಸಿದ್ಧಾರ್ಥ್ ನಾಥ್ ಸಿಂಗ್, ಕಾನೂನುಬಾಹಿರ ಧಾರ್ಮಿಕ ಪರಿವರ್ತನೆಯನ್ನು ತಡೆಗಟ್ಟಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದು(ನ.24-ಮಂಗಳವಾರ) ಸಂಜೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ಒತ್ತಾಯದ ಮತಾಂತರದ ವಿರುದ್ಧ ಸುಗ್ರೀವಾಜ್ಞೆ ಜಾರಿಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು.
ಲವ್ ಜಿಹಾದ್ ನಿಲ್ಲಿಸದೇ ಇದ್ದರೆ ರಾಮ್ ನಾಮ್ ಸತ್ಯ ಹೈ ಯಾನ: ಸಿಎಂ ಯೋಗಿ ಖಡಕ್ ಎಚ್ಚರಿಕೆ
ಒತ್ತಾಯದ ಮತಾಂತರಕ್ಕೆ 1-5 ವರ್ಷಗಳ ಜೈಲುಶಿಕ್ಷೆ ಹಾಗೂ 15,000 ರೂ. ದಂಡ, ಎಸ್ಸಿ / ಎಸ್ಟಿ ಸಮುದಾಯದ ಅಪ್ರಾಪ್ತಮತ್ತು ವಯಸ್ಕ ಮಹಿಳೆಯರ ಒತ್ತಾಯದ ಮತಾಂತರಕ್ಕೆ 3-10 ವರ್ಷಗಳ ಜೈಲುಶಿಕ್ಷೆ ಹಾಗೂ 25,000 ರೂ.ಗಳ ದಂಡ ವಿಧಿಸಲು ಸುಗ್ರೀವಾಜ್ಞೆಯಲ್ಲಿ ಅವಕಾಶ ನೀಡಲಾಗಿದೆ.
ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವ ಕುರಿತು ದೇಶಾದ್ಯಂತ ಚರ್ಚೆಯಾಗುತ್ತಿದೆ. ಅಲ್ಲದೇ ಮಧ್ಯಪ್ರದೇಶ, ಕರ್ನಾಟಕ ಹಾಗೂ ಹರಿಯಾಣದಲ್ಲೂ ಇಂತದ್ದೇ ಕಾನೂನುಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರಗಳು ನಿರ್ಧರಿಸಿವೆ.
ಶೀಘ್ರದಲ್ಲೇ ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು: 5 ವರ್ಷ ಜೈಲುಶಿಕ್ಷೆ?
ಈ ಮಧ್ಯೆ ಲವ್ ಜಿಹಾದ್ ವಿರುದ್ಧ ಉತ್ತರಪ್ರದೇಶ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆ ಇದೀಗ ಇಡೀ ದೇಶದ ಗಮನ ಸೆಳೆದಿದೆ. ಕಳೆದ ತಿಂಗಳಷ್ಟೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲವ್ ಜಿಹಾದ್ ಬೆಂಬಲಿಸುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಲವ್ ಜಿಹಾದ್ ಎಂದು ಕರೆಯಲಾಗುವ ಒತ್ತಾಯದ ಮತಾಂತರ ಪ್ರಕರಣಗಳನ್ನು ತಡೆಗಟ್ಟಲು, ಸುಗ್ರೀವಾಜ್ಷೆಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಉತ್ತರಪ್ರದೇಶ ಸಿದ್ಧಾರ್ಥ್ ನಾಥ್ ಸಿಂಗ್, ಕಾನೂನುಬಾಹಿರ ಧಾರ್ಮಿಕ ಪರಿವರ್ತನೆಯನ್ನು ತಡೆಗಟ್ಟಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದು(ನ.24-ಮಂಗಳವಾರ) ಸಂಜೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ಒತ್ತಾಯದ ಮತಾಂತರದ ವಿರುದ್ಧ ಸುಗ್ರೀವಾಜ್ಞೆ ಜಾರಿಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು.
ಲವ್ ಜಿಹಾದ್ ನಿಲ್ಲಿಸದೇ ಇದ್ದರೆ ರಾಮ್ ನಾಮ್ ಸತ್ಯ ಹೈ ಯಾನ: ಸಿಎಂ ಯೋಗಿ ಖಡಕ್ ಎಚ್ಚರಿಕೆ
ಒತ್ತಾಯದ ಮತಾಂತರಕ್ಕೆ 1-5 ವರ್ಷಗಳ ಜೈಲುಶಿಕ್ಷೆ ಹಾಗೂ 15,000 ರೂ. ದಂಡ, ಎಸ್ಸಿ / ಎಸ್ಟಿ ಸಮುದಾಯದ ಅಪ್ರಾಪ್ತಮತ್ತು ವಯಸ್ಕ ಮಹಿಳೆಯರ ಒತ್ತಾಯದ ಮತಾಂತರಕ್ಕೆ 3-10 ವರ್ಷಗಳ ಜೈಲುಶಿಕ್ಷೆ ಹಾಗೂ 25,000 ರೂ.ಗಳ ದಂಡ ವಿಧಿಸಲು ಸುಗ್ರೀವಾಜ್ಞೆಯಲ್ಲಿ ಅವಕಾಶ ನೀಡಲಾಗಿದೆ.
ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸುವ ಕುರಿತು ದೇಶಾದ್ಯಂತ ಚರ್ಚೆಯಾಗುತ್ತಿದೆ. ಅಲ್ಲದೇ ಮಧ್ಯಪ್ರದೇಶ, ಕರ್ನಾಟಕ ಹಾಗೂ ಹರಿಯಾಣದಲ್ಲೂ ಇಂತದ್ದೇ ಕಾನೂನುಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರಗಳು ನಿರ್ಧರಿಸಿವೆ.
ಶೀಘ್ರದಲ್ಲೇ ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು: 5 ವರ್ಷ ಜೈಲುಶಿಕ್ಷೆ?
ಈ ಮಧ್ಯೆ ಲವ್ ಜಿಹಾದ್ ವಿರುದ್ಧ ಉತ್ತರಪ್ರದೇಶ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆ ಇದೀಗ ಇಡೀ ದೇಶದ ಗಮನ ಸೆಳೆದಿದೆ. ಕಳೆದ ತಿಂಗಳಷ್ಟೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲವ್ ಜಿಹಾದ್ ಬೆಂಬಲಿಸುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.