ಆ್ಯಪ್ನಗರ

ಈ ಗ್ರಾಮಕ್ಕೆ ರಾಜಕಾರಣಿಗಳ ಭೇಟಿ ನಿಷೇಧ

ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸದ ರಾಜಕಾರಣಿಗಳಿಗೆ ಗ್ರಾಮ ಪ್ರವೇಶ ನಿಷೇಧಿಸಲಾಗಿದೆ ಎಂದು ವಲ್ಸಾದ್ ಜಿಲ್ಲೆಯ ಗೋರ್ಗಮ್‌ ಗ್ರಾಮದ ಪ್ರವೇಶ ದ್ವಾರದಲ್ಲಿ ಸೂಚನಾ ಫಲಕ ಹಾಕಲಾಗಿದೆ.

ಟೈಮ್ಸ್ ಆಫ್ ಇಂಡಿಯಾ 22 May 2017, 3:27 pm
ಸೂರತ್: ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸದ ರಾಜಕಾರಣಿಗಳಿಗೆ ಗ್ರಾಮ ಪ್ರವೇಶ ನಿಷೇಧಿಸಲಾಗಿದೆ ಎಂದು ವಲ್ಸಾದ್ ಜಿಲ್ಲೆಯ ಗೋರ್ಗಮ್‌ ಗ್ರಾಮದ ಪ್ರವೇಶ ದ್ವಾರದಲ್ಲಿ ಸೂಚನಾ ಫಲಕ ಹಾಕಲಾಗಿದೆ.
Vijaya Karnataka Web valsad sarpanch bans politicians entry
ಈ ಗ್ರಾಮಕ್ಕೆ ರಾಜಕಾರಣಿಗಳ ಭೇಟಿ ನಿಷೇಧ


ರಾಜಕಾರಣಿಗಳು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಇಂತಹ ರಾಜಕಾರಣಿಗಳು ನಮ್ಮ ಗ್ರಾಮಗಳಿಗೆ ಭೇಟಿ ನೀಡುವುದೇ ಬೇಡ ಎಂದು ಗ್ರಾಮಸ್ಥರು ಫಲಕ ಹಾಕಿದ್ದಾರೆ.

ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳನ್ನು ಹೊರತುಪಡಿಸಿ ಬೇರೆ ರಾಜಕಾರಣಿಗಳ ಪ್ರವೇಶ ನಿಷೇಧಿಸಲಾಗಿದೆ ಎಂದು ಗ್ರಾಮದ ಸರಪಂಚರ ಹೆಸರಿನಲ್ಲಿ ಸೂಚನಾ ಫಲಕ ಅಳವಡಿಸಲಾಗಿದೆ.

ಇಂತಹ ಸೂಚನಾ ಫಲಕವನ್ನು ಅಧಿಕಾರಿಗಳು ಎಂದಿಗೂ ನಿರೀಕ್ಷಿಸಿರಲಿಲ್ಲ. ಏಕೆಂದರೆ, ಗ್ರಾಮದ ಮುಖ್ಯಸ್ಥ ವಿನೋದ್ ಪಟೇಲ್ ದೀರ್ಘಕಾಲದಿಂದಲೂ ಬಿಜೆಪಿಯ ಜತೆ ಉತ್ತಮ ಸಂಬಂಧ ಹೊಂದಿದ್ದಾರೆ.

ಹಲವು ವರ್ಷಗಳಿಂದ ಇಲ್ಲಿನ ಗ್ರಾಮಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ರಾಜಕಾರಣಿಗಳು ಕೇವಲ ಭರವಸೆ ನೀಡುತ್ತಿದ್ದಾರೆ, ಹೊರತು ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುತ್ತಿಲ್ಲ. 'ನಮ್ಮ ಗ್ರಾಮದ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುವ ರಾಜಕಾರಣಿಗಳಿಗೆ ಇದು ಸ್ಪಷ್ಟ ಸೂಚನೆಯಾಗಿದೆ' ಎಂದು ವಿನೋದ್ ಪಟೇಲ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ