ಆ್ಯಪ್ನಗರ

ಮಂದಿರ ನಿರ್ಮಾಣ ವಿರುದ್ಧದ ಶಕ್ತಿಗಳ ವಿರುದ್ಧ ಕ್ರಮಕ್ಕೆ ಪ್ರಧಾನಿ, ಸಿಜೆಐಗೆ ಒತ್ತಾಯ

ಸುಪ್ರೀಂ ಕೋರ್ಟ್‌ನಲ್ಲಿ ರಾಮಮಂದಿರ ನಿರ್ಮಾಣ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಸಿಜೆಐಗೆ ಕೂಡ ವಿಚಾರಣೆಯನ್ನು ಶೀಘ್ರವಾಗಿ ನಡೆಸುವಂತೆ ಒತ್ತಾಯಿಸಲು ಸಭೆಯಲ್ಲಿದ್ದ ಸಂತರೆಲ್ಲರೂ ನಿರ್ಣಯಿಸಿದ್ದಾರೆ.

PTI 21 Jun 2019, 5:00 am
ಹರಿದ್ವಾರ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯವನ್ನು ಅತಿ ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಬಿಜೆಪಿ ಮೇಲೆ ಹೆಚ್ಚಿನ ಒತ್ತಡ ಹೇರಲು ವಿಶ್ವ ಹಿಂದೂ ಪರಿಷದ್‌ ನಿರ್ಧರಿಸಿದೆ. ಎರಡು ದಿನಗಳ ಕೇಂದ್ರೀಯ ಮಾರ್ಗದರ್ಶಕ ಮಂಡಲ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
Vijaya Karnataka Web vhp

ಪ್ರಧಾನಿ ನರೇಂದ್ರ ಮೋದಿ ಅವರನ್ನು ಆದಷ್ಟು ಶೀಘ್ರ ಭೇಟಿ ಮಾಡಿ ಸಭೆಯ ನಿರ್ಣಯಗಳನ್ನು ಸಲ್ಲಿಸಲು ಸಂತರು ನಿರ್ಧರಿಸಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ರಾಮಮಂದಿರ ನಿರ್ಮಾಣ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಸಿಜೆಐಗೆ ಕೂಡ ವಿಚಾರಣೆಯನ್ನು ಶೀಘ್ರವಾಗಿ ನಡೆಸುವಂತೆ ಒತ್ತಾಯಿಸಲು ಸಭೆಯಲ್ಲಿದ್ದ ಸಂತರೆಲ್ಲರೂ ನಿರ್ಣಯಿಸಿದ್ದಾರೆ.

''ರಾಮಮಂದಿರ ನಿರ್ಮಾಣ ಕಾರ್ಯ ಒಂದು ಪವಿತ್ರ ರಾಷ್ಟ್ರೀಯ ಕಾರ್ಯವಾಗಿದೆ. 1984ರಿಂದಲೂ ಈ ಕುರಿತು ಹೋರಾಟ ನಡೆಯುತ್ತಿದೆ. ರಾಮ ಮಂದಿರ ನಿರ್ಮಾಣವನ್ನು ವಿರೋಧಿಸುವ ಹಲವು ಶಕ್ತಿಗಳು ನ್ಯಾಯಾಂಗ ಪ್ರಕ್ರಿಯೆಯಲ್ಲಿ ತೊಡಕು ಮೂಡಿಸುತ್ತಿವೆ. ಇದನ್ನು ಸರಕಾರವೇ ಮುಂದೆ ಬಂದು ಪರಿಹರಿಸಬೇಕು. ಜತೆಗೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯೂ ರದ್ದುಗೊಳ್ಳಬೇಕು ಎಂದು ಪ್ರಧಾನಿ ಮೋದಿ ಅವರಲ್ಲಿ ಆಗ್ರಹಿಸುತ್ತೇವೆ,'' ಎಂದು ಸಭೆ ಬಳಿಕ ಸಂತರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ