ಆ್ಯಪ್ನಗರ

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೊನಾ ಪಾಸಿಟಿವ್: ರೋಗ ಲಕ್ಷಣವಿಲ್ಲ ಎಂದ ವೈದ್ಯರು!

ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ​ಆದರೆ ವೆಂಕಯ್ಯ ನಾಯ್ಡು ಅವರಿಗೆ ರೋಗ ಲಕ್ಷಣವಿಲ್ಲ ಎಂದು ರಾಷ್ಟ್ರಪತಿಳ ಕಾರ್ಯಾಲಯ ಸ್ಪಷ್ಟಪಡಿಸಿದೆ.

Vijaya Karnataka Web 29 Sep 2020, 9:52 pm
ಹೊಸದಿಲ್ಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
Vijaya Karnataka Web Venkaiah Naidu
ಸಂಗ್ರಹ ಚಿತ್ರ


ಈ ಕುರಿತು ಖುದ್ದು ಮಾಹಿತಿ ನೀಡಿರುವ ಉಪ ರಾಷ್ಟ್ರಪತಿ ಕಾರ್ಯಾಲಯ, ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಪರೀಕ್ಷೆ ಮಾಡಿದಾಗ ಪಾಸಿಟಿವ್ ಫಲಿತಾಂಶ ಬಂದಿದೆ ಎಂದು ಸ್ಪಷ್ಟಪಡಿಸಿದೆ.

ಕೊರೊನಾತಂಕದ ನಡುವೆ ದಸರಾ ನಿಭಾಯಿಸೋದು ಸವಾಲಿನ ಕೆಲಸ: ರೋಹಿಣಿ ಸಿಂಧೂರಿ

ಆದರೆ ವೆಂಕಯ್ಯ ನಾಯ್ಡು ಅವರಿಗೆ ರೋಗ ಲಕ್ಷಣವಿಲ್ಲದೇ ಇರುವುದು ಸಮಾಧಾನಕರ ಸಂಗತಿಯಾಗಿದೆ. ಅದರಂತೆ ವೈದ್ಯರ ಸಲಹೆ ಮೇರೆಗೆ ವೆಂಕಯ್ಯ ನಾಯ್ಡು ಕ್ವಾರಂಟೈನ್‌ಗೆ ಗುರಿಯಾಗಿದ್ದಾರೆ.


ವೆಂಕಯ್ಯ ನಾಯ್ಡು ಅವರ ಆರೋಗ್ಯದ ಮೇಲೆ ವೈದ್ಯರು ನಿರಂತರ ನಿಗಾವಹಿಸಲಿದ್ದು, ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ.

ಅಧಿವೇಶನದಲ್ಲಿ ಭಾಗಿಯಾದ ಶಾಸಕರಿಗೆ ಶುರುವಾಯ್ತು ಕೋವಿಡ್ ಆತಂಕ!

ಉಪ ರಾಷ್ಟ್ರಪತಿಗಳಿಗೆ ರೋಗ ಲಕ್ಷಣ ಇಲ್ಲದೇ ಇರುವುದರಿಂದ ಅವರನ್ನು ಕ್ವಾರಂಟೈನ್‌ಗೆ ಗುರಿಪಡಿಸಿ ಮನೆಯಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ