ಆ್ಯಪ್ನಗರ

ಭಾರತಕ್ಕೆ ಮರಳಲು ಮಲ್ಯ ಇಂಗಿತ?

ಉದ್ಯಮಿ ವಿಜಯ್‌ ಮಲ್ಯ ಭಾರತಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

Vijaya Karnataka 25 Jul 2018, 11:18 am
ಹೊಸದಿಲ್ಲಿ: ಉದ್ಯಮಿ ವಿಜಯ್‌ ಮಲ್ಯ ಭಾರತಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. 9,000 ಕೋಟಿ ರೂ. ಸುಸ್ತಿ ಸಾಲ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿಜಯ್‌ ಮಲ್ಯ, ಭಾರತಕ್ಕೆ ಹಿಂತಿರುಗಿ ಕಾನೂನು ಕ್ರಮ ಎದುರಿಸಲು ಸಿದ್ಧವಿರುವುದಾಗಿ ಅಧಿಕಾರಿಗಳಿಗೆ ತಮ್ಮ ಆಪ್ತರ ಮೂಲಕ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.
Vijaya Karnataka Web Mallya


ಭಾರತೀಯ ಅಧಿಕಾರಿಗಳು ಲಂಡನ್‌ ಕೋರ್ಟ್‌ನಲ್ಲಿ ಮಲ್ಯರ ಗಡಿಪಾರು ಕುರಿತು ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ. ಇತ್ತೀಚಿನ ಘೋಷಿತ ಅಪರಾಧಿಗಳ ಕಾಯಿದೆ ಅಡಿಯಲ್ಲಿ ಮಲ್ಯ ವಿರುದ್ಧ ಕಾನೂನು ಕ್ರಮ ಬಿಗಿಯಾಗುತ್ತಿದೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ಮಲ್ಯ ಅವರಿಗೆ ಸೇರಿದ ಸಾವಿರಾರು ಕೋಟಿ ರೂ. ಆಸ್ತಿಪಾಸ್ತಿಗಳ ಜಪ್ತಿಯನ್ನು ನಿರೀಕ್ಷಿಸುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ