ಗುರುಗ್ರಾಮ: ದೇಶಾದ್ಯಂತ ಬಿಡುಗಡೆಯಾಗುತ್ತಿರುವ 'ಪದ್ಮಾವತ್' ಸಿನಿಮಾ ಬಿಡುಗಡೆ ವಿರೋಧಿಸಿ ಹಲವೆಡೆ ಕರ್ಣಿ ಸೇನಾ ಪ್ರತಿಭಟನೆ ನಡೆಸುತ್ತಿದ್ದು, ಬುಧಾರದಂದು ಗುರುಗ್ರಾಮದ ಶಾಲಾ ಬಸ್ ಮೇಲೆ ಕರ್ಣಿ ಸೇನಾ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಮಾಹಿತಿಗಳ ಪ್ರಕಾರ, ಗುರುಗ್ರಾಮ ಹಾಗೂ ನೋಯ್ಡಾದಲ್ಲಿ ಈಗಾಗಲೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ, ಈ ನಡುವೆ ಬುಧವಾರದಂದು ಕರ್ಣಿ ಸೇನಾ ಕಾರ್ಯಕರ್ತರು ಗುರುಗ್ರಾಮದಲ್ಲಿ ಮನೆಗೆ ಹಿಂತಿರುಗುತ್ತಿದ್ದ ಶಾಲಾ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಮಕ್ಕಳು ಭಯದಿಂದ ಅಳುತ್ತಾ ಕೂಗಿಕೊಂಡು, ಕಲ್ಲೇಟಿನಿಂದ ತಪ್ಪಿಸಿಕೊಳ್ಳಲು ಕುರ್ಚಿಗಳ ಕೆಳಗೆ ತೂರಿ ಜೀವ ಉಳಿಸಿಕೊಂಡಿದ್ದಾರೆ. ಬಸ್ಸಿನ ಗಾಜುಗಳು ಒಡೆದಿದ್ದು ಕಾರ್ಯಕರ್ತರ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗಿದೆ.
ಗುರುಗ್ರಾಮ-ಅಲ್ವಾರ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರ ಮುಂದೆಯೇ ಪಟ್ರೋಲ್ ಬಾಂಬ್ ದಾಳಿ ನಡೆಸಿದ ದುಷ್ಕರ್ಮಿಗಳ ಗುಂಪು, ಬಸ್ಸಿಗೆ ಸಂಪೂರ್ಣವಾಗಿ ಬೆಂಕಿಗೆ ಹಚ್ಚುವ ಯೋಜನೆ ರೂಪಿಸಿದಂತೆ ಕಾಣಿಸುತ್ತಿತ್ತು. ಆದರೆ ಪೊಲೀಸರು ಕೂಡಲೇ ಈ ಗಂಪನ್ನು ತಡೆದಿದ್ದರು. ಅಲ್ಲದೇ ಬಸ್ನಲ್ಲಿ ಇಬ್ಬರು ಶಿಕ್ಷಕರೂ ಸೇರಿದಂತೆ 24 ಮಕ್ಕಳಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಗುರುಗ್ರಾಮ ಹಾಗೂ ನೋಯ್ಡಾದಲ್ಲಿ ಈಗಾಗಲೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ, ಈ ನಡುವೆ ಬುಧವಾರದಂದು ಕರ್ಣಿ ಸೇನಾ ಕಾರ್ಯಕರ್ತರು ಗುರುಗ್ರಾಮದಲ್ಲಿ ಮನೆಗೆ ಹಿಂತಿರುಗುತ್ತಿದ್ದ ಶಾಲಾ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಮಕ್ಕಳು ಭಯದಿಂದ ಅಳುತ್ತಾ ಕೂಗಿಕೊಂಡು, ಕಲ್ಲೇಟಿನಿಂದ ತಪ್ಪಿಸಿಕೊಳ್ಳಲು ಕುರ್ಚಿಗಳ ಕೆಳಗೆ ತೂರಿ ಜೀವ ಉಳಿಸಿಕೊಂಡಿದ್ದಾರೆ. ಬಸ್ಸಿನ ಗಾಜುಗಳು ಒಡೆದಿದ್ದು ಕಾರ್ಯಕರ್ತರ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗಿದೆ.
ಗುರುಗ್ರಾಮ-ಅಲ್ವಾರ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರ ಮುಂದೆಯೇ ಪಟ್ರೋಲ್ ಬಾಂಬ್ ದಾಳಿ ನಡೆಸಿದ ದುಷ್ಕರ್ಮಿಗಳ ಗುಂಪು, ಬಸ್ಸಿಗೆ ಸಂಪೂರ್ಣವಾಗಿ ಬೆಂಕಿಗೆ ಹಚ್ಚುವ ಯೋಜನೆ ರೂಪಿಸಿದಂತೆ ಕಾಣಿಸುತ್ತಿತ್ತು. ಆದರೆ ಪೊಲೀಸರು ಕೂಡಲೇ ಈ ಗಂಪನ್ನು ತಡೆದಿದ್ದರು. ಅಲ್ಲದೇ ಬಸ್ನಲ್ಲಿ ಇಬ್ಬರು ಶಿಕ್ಷಕರೂ ಸೇರಿದಂತೆ 24 ಮಕ್ಕಳಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.