ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಅನಿಲ ದುರಂತ ಸಂಭವಿಸಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ತುರ್ತಾಗಿ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪರಿಸ್ಥಿತಿಯನ್ನು ನಿಕಟವಾಗಿ ನಿಗಾ ವಹಿಸುತ್ತಿರುವ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಅಲ್ಲದೆ ವಿಶಾಖಪಟ್ಟದಲ್ಲಿರುವ ಎಲ್ಲರ ಸುರಕ್ಷತೆ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ನುಡಿದಿದ್ದಾರೆ.
ನಡುರಾತ್ರಿಯಲ್ಲೇಕೆ ಸೋರಿತು ವಿಷಾನಿಲ?: ಎಲ್ಜಿ ಪಾಲಿಮರ್ಸ್ ಕಾರ್ಖಾನೆಯಲ್ಲಿ ಆಗಿದ್ದೇನು?
ಈ ಮೊದಲು ಬೆಳಗ್ಗೆ 11ರ ವೇಳೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಅಧಿಕಾರಿಗಳ ಜೊತೆಗೆ ಪ್ರಧಾನ ಮಂತ್ರಿ ಕಚೇರಿ ಚರ್ಚೆ ನಡೆಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಮೂಲಗಳು ವರದಿ ಮಾಡಿತ್ತು.
ಮುಂಜಾನೆ 3ರ ಹೊತ್ತಿಗೆ ಆಂಧ್ರಪ್ರದೇಶದ ವಿಶಾಖಪಟ್ಟದ ವೆಂಕಟಾಪುರದಲ್ಲಿರುವ ಎಲ್ಜಿ ಪಾಲಿಮರ್ಸ್ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ ಉಂಟಾಗಿತ್ತು.
ಪರಿಣಾಮ ಸುತ್ತು ಮುತ್ತಲಿನ ಪ್ರದೇಶದಲ್ಲಿ ಜನರಲ್ಲಿ ಗಂಭೀರವಾದ ಆರೋಗ್ಯ ಸಮಸ್ಯೆ ಎದುರಾಗಿದೆ. ವರದಿಗಳ ಪ್ರಕಾರ ಮಗು ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ ಅಲ್ಲದೆ 200ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.
ವಿಶಾಖಪಟ್ಟಣ: ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; 8 ಸಾವಿನ ಸಂಖ್ಯೆ, 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವಂತೆಯೇ 5,000ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಸಾಧ್ಯತೆಯಿದೆ. ಜನರಲ್ಲಿ ಉಸಿರಾಟ ತೊಂದರೆ, ಕಣ್ಣು ಉರಿ ಇತ್ಯಾದಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
ಅನೇಕ ಮಂದಿ ಆರೋಗ್ಯ ತೊಂದರೆಯಿಂದಾಗಿ ಪ್ರಜ್ಞಾಹೀನರಾಗಿದ್ದರು. ಬಳಿಕ ಸ್ಥಳಕ್ಕೆ ಧಾವಿಸಿದ ಆಂಬುಲೆನ್ಸ್, ಅಗ್ನಿ ಶಾಮಕ ದಳ ಅಸ್ವಸ್ಥ ಜನರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿತ್ತು. ಇನ್ನೊಂದೆಡೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಅಲ್ಲದೆ ವಿಶಾಖಪಟ್ಟದಲ್ಲಿರುವ ಎಲ್ಲರ ಸುರಕ್ಷತೆ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ನುಡಿದಿದ್ದಾರೆ.
ನಡುರಾತ್ರಿಯಲ್ಲೇಕೆ ಸೋರಿತು ವಿಷಾನಿಲ?: ಎಲ್ಜಿ ಪಾಲಿಮರ್ಸ್ ಕಾರ್ಖಾನೆಯಲ್ಲಿ ಆಗಿದ್ದೇನು?
ಈ ಮೊದಲು ಬೆಳಗ್ಗೆ 11ರ ವೇಳೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಅಧಿಕಾರಿಗಳ ಜೊತೆಗೆ ಪ್ರಧಾನ ಮಂತ್ರಿ ಕಚೇರಿ ಚರ್ಚೆ ನಡೆಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಮೂಲಗಳು ವರದಿ ಮಾಡಿತ್ತು.
ಮುಂಜಾನೆ 3ರ ಹೊತ್ತಿಗೆ ಆಂಧ್ರಪ್ರದೇಶದ ವಿಶಾಖಪಟ್ಟದ ವೆಂಕಟಾಪುರದಲ್ಲಿರುವ ಎಲ್ಜಿ ಪಾಲಿಮರ್ಸ್ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ ಉಂಟಾಗಿತ್ತು.
ಪರಿಣಾಮ ಸುತ್ತು ಮುತ್ತಲಿನ ಪ್ರದೇಶದಲ್ಲಿ ಜನರಲ್ಲಿ ಗಂಭೀರವಾದ ಆರೋಗ್ಯ ಸಮಸ್ಯೆ ಎದುರಾಗಿದೆ. ವರದಿಗಳ ಪ್ರಕಾರ ಮಗು ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ ಅಲ್ಲದೆ 200ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.
ವಿಶಾಖಪಟ್ಟಣ: ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; 8 ಸಾವಿನ ಸಂಖ್ಯೆ, 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವಂತೆಯೇ 5,000ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಸಾಧ್ಯತೆಯಿದೆ. ಜನರಲ್ಲಿ ಉಸಿರಾಟ ತೊಂದರೆ, ಕಣ್ಣು ಉರಿ ಇತ್ಯಾದಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
ಅನೇಕ ಮಂದಿ ಆರೋಗ್ಯ ತೊಂದರೆಯಿಂದಾಗಿ ಪ್ರಜ್ಞಾಹೀನರಾಗಿದ್ದರು. ಬಳಿಕ ಸ್ಥಳಕ್ಕೆ ಧಾವಿಸಿದ ಆಂಬುಲೆನ್ಸ್, ಅಗ್ನಿ ಶಾಮಕ ದಳ ಅಸ್ವಸ್ಥ ಜನರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿತ್ತು. ಇನ್ನೊಂದೆಡೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.