ಆ್ಯಪ್ನಗರ

ಕೈಗೆ ಮತ ಹಾಕಿದರೆ ಕಮಲ ಗೆದ್ದಂತೆ: ಕೇಜ್ರಿವಾಲ್

ದಿಲ್ಲಿ ಕಾಂಗ್ರೆಸ್ ನೂತನ ಅಧ್ಯಕ್ಷೆ ಶೀಲಾ ದೀಕ್ಷಿತ್ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿರುವ ಬೆನ್ನಲ್ಲೇ ಕೇಜ್ರಿವಾಲ್ ಈ ಹೇಳಿಕೆ ನೀಡಿರುವುದು ಗಮನಾರ್ಹ.

TIMESOFINDIA.COM 13 Jan 2019, 10:36 am
ಹೊಸದಿಲ್ಲಿ: ಕಾಂಗ್ರೆಸ್‌ಗೆ ಮತ ಹಾಕುವುದೆಂದರೆ ಅದು ಬಿಜೆಪಿಯನ್ನು ಗೆಲ್ಲಿಸಿದಂತೆ ಎಂದು ಹೊಸದಿಲ್ಲಿ ಮುಖ್ಯಮಂತ್ರಿ , ಆಪ್ ನಾಯಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
Vijaya Karnataka Web Kejrival 1


ದಿಲ್ಲಿ ಕಾಂಗ್ರೆಸ್ ನೂತನ ಅಧ್ಯಕ್ಷೆ ಶೀಲಾ ದೀಕ್ಷಿತ್ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿರುವ ಬೆನ್ನಲ್ಲೇ ಕೇಜ್ರಿವಾಲ್ ಈ ಹೇಳಿಕೆ ನೀಡಿರುವುದು ಗಮನಾರ್ಹ.

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಆಪ್ ಸಿದ್ಧತೆಗಳನ್ನು ವಿಮರ್ಶಿಸಲು ಕರೆದಿದ್ದ ಸಭೆಯಲ್ಲಿ ಮಾತನಾಡುತ್ತಿದ್ದ ಪಕ್ಷದ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್, ಕಾಂಗ್ರೆಸ್ ಭ್ರಷ್ಟಾಚಾರದ ರೈಲನ್ನು ಆರಂಭಿಸಿತ್ತು, ಮೋದಿ ಅದನ್ನು ಚಾಲನೆ ಮಾಡುತ್ತಿದ್ದಾರೆ. ಮುಖಗಳು ಬದಲಾಗಿವೆ, ಆದರೆ ಭ್ರಷ್ಟಾಚಾರ ಹಾಗೆಯೇ ಉಳಿದಿದೆ. ಭ್ರಷ್ಟಾಚಾರದ ದುಷ್ಪರಿಣಾಮಗಳಿಂದ ದೇಶವನ್ನು ಮುಕ್ತಗೊಳಿಸಲು ಎಲ್ಲರೂ ಒಂದಾಗಿ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಭ್ರಷ್ಟ ಕಾಂಗ್ರೆಸ್‌ನ್ನು ಅಧಿಕಾರದಿಂದ ಕಿತ್ತೊಗೆಯುವ ಮೂಲಕ ನಾವದನ್ನು ಸಾಧಿಸಿದ್ದೆವು ಎಂದು ಅವರು ಹೇಳಿದರು.

ಮನೆ ಮನೆ ಅಭಿಯಾನ ನಡೆಸಿ ಮತ್ತು ಕಾಂಗ್ರೆಸ್‌ಗೆ ಮತ ಹಾಕಿದರೆ, ಅದು ಬಿಜೆಪಿಗೆ ಗೆಲುವು ತಂದುಕೊಟ್ಟಂತೆ ಎಂಬುದನ್ನು ಜನರಿಗೆ ಅರ್ಥ ಮಾಡಿಸಿ ಎಂದು ಕಾರ್ಯಕರ್ತರನ್ನುದ್ದೇಶಿಸಿ ಕೇಜ್ರಿವಾಲ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ