ಆ್ಯಪ್ನಗರ

ಕಾಪ್ಟರ್‌ ಹಗರಣದಲ್ಲಿ ನಿರೀಕ್ಷಣಾ ಜಾಮೀನಿಗೆ ಉದ್ಯಮಿ ಮೊರೆ

ದುಬೈ ಮೂಲದ ಉದ್ಯಮಿ ರಾಜೀವ್‌ ಸಕ್ಸೇನಾ ನಿರೀಕ್ಷಣಾ ಜಾಮೀನು ಕೋರಿ ದಿಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Vijaya Karnataka 18 Dec 2018, 5:00 am
ಹೊಸದಿಲ್ಲಿ: ಯುಪಿಎ ಸರಕಾರದ ಅವಧಿಯಲ್ಲಿ ನಡೆದಿರುವ 3,600 ಕೋಟಿ ರೂ. ಮೊತ್ತದ ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಹೆಲಿಕಾಪ್ಟರ್‌ ಹಗರಣಕ್ಕೆ ಸಂಬಂಧಿಸಿದಂತೆ ದುಬೈ ಮೂಲದ ಉದ್ಯಮಿ ರಾಜೀವ್‌ ಸಕ್ಸೇನಾ ನಿರೀಕ್ಷಣಾ ಜಾಮೀನು ಕೋರಿ ದಿಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕಾಪ್ಟರ್‌ ಹಗರಣದಲ್ಲಿ ಕೋರ್ಟ್‌ ಈಗಾಗಲೇ ಸಕ್ಸೇನಾ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿದೆ. ಜಾರಿ ನಿರ್ದೇಶನಾಲಯದಿಂದ ಡಿ.24ರೊಳಗೆ ಪ್ರತಿಕ್ರಿಯೆ ಪಡೆದ ಬಳಿಕ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ನ್ಯಾಯಾಲಯ ಹೇಳಿದೆ. ಇವರು, 'ಯುಎಚ್‌ವೈ ಸಕ್ಸೇನಾ' ಮತ್ತು 'ಮ್ಯಾಟ್ರಿಕ್ಸ್‌ ಹೋಲ್ಡಿಂಗ್ಸ್‌' ಕಂಪನಿಗಳ ನಿರ್ದೇಶಕರಾಗಿದ್ದಾರೆ.
Vijaya Karnataka Web Italy_-_Navy_EHI_EH-101_(cropped)




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ