ಆ್ಯಪ್ನಗರ

ಶಾಲೆ ಆರಂಭಿಸುವಂತೆ ಸರಕಾರಗಳಿಗೆ ಯಾವುದೇ ನಿರ್ದೇಶನ ನೀಡುವುದಿಲ್ಲ; ಸುಪ್ರೀಂ ಕೋರ್ಟ್

ಶೀಘ್ರ ಭೌತಿಕ ತರಗತಿ ಆರಂಭಕ್ಕೆ ಸರಕಾರಗಳಿಗೆ ಆದೇಶ ನೀಡಬೇಕು ಎಂದು ಕೋರಿ ದಿಲ್ಲಿ ಮೂಲದ ವಿದ್ಯಾರ್ಥಿಯೊಬ್ಬ ಸಲ್ಲಿಸಿದ್ದ ಪಿಐಎಲ್‌ನ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಈ ವಿಷಯದಲ್ಲಿ ನ್ಯಾಯಾಲಯ ಯಾವುದೇ ಸೂಚನೆ ನೀಡಲು ಸಾಧ್ಯವಿಲ್ಲ. ಇದು ನ್ಯಾಯಾಲಯದ ನಿರ್ದೇಶನದ ವ್ಯಾಪ್ತಿಗೆ ಒಳಪಡುವ ವಿಷಯವಲ್ಲ. ಪರಿಸ್ಥಿತಿಯನ್ನು ಆಧರಿಸಿ ಸಂಬಂಧಿಸಿದ ಸರಕಾರಗಳು ಶಾಲೆ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿತು.

Vijaya Karnataka 21 Sep 2021, 7:22 am
ಹೊಸದಿಲ್ಲಿ: ಕೋವಿಡ್‌ ಕಾರಣ ಆನ್‌ಲೈನ್‌ ಮೋಡ್‌ಗೆ ಮೊರೆ ಹೋಗಿರುವ ಶಾಲಾಗಳನ್ನು ಮರಳಿ ಆಫ್‌ಲೈನ್‌ಗೆ ತರುವ ಚಿಂತನೆ ನಡೆದಿದೆ. ಆದರೆ ಈ ದಿಸೆಯಲ್ಲಿ ತಾನು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಯಾವುದೇ ನಿರ್ದೇಶನ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಸ್ಪಷ್ಟಪಡಿಸಿದೆ.
Vijaya Karnataka Web supreme court
Supreme Court (File Photo)


ಸೋಂಕು ಭೀತಿಯಿಂದ ಶಾಲೆಗಳ ಭೌತಿಕ ತರಗತಿಗಳಿಗೆ ತಡೆ ಬಿದ್ದಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಅಡ್ಡಿಯುಂಟಾಗಿದೆ. ಶೀಘ್ರ ಭೌತಿಕ ತರಗತಿ ಆರಂಭಕ್ಕೆ ಸರಕಾರಗಳಿಗೆ ಆದೇಶ ನೀಡಬೇಕು ಎಂದು ಕೋರಿ ದಿಲ್ಲಿ ಮೂಲದ ವಿದ್ಯಾರ್ಥಿಯೊಬ್ಬ ಪಿಐಎಲ್‌ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಈ ವಿಷಯದಲ್ಲಿ ನ್ಯಾಯಾಲಯ ಯಾವುದೇ ಸೂಚನೆ ನೀಡಲು ಸಾಧ್ಯವಿಲ್ಲ. ಇದು ನ್ಯಾಯಾಲಯದ ನಿರ್ದೇಶನದ ವ್ಯಾಪ್ತಿಗೆ ಒಳಪಡುವ ವಿಷಯವಲ್ಲ. ಪರಿಸ್ಥಿತಿಯನ್ನು ಆಧರಿಸಿ ಸಂಬಂಧಿಸಿದ ಸರಕಾರಗಳು ಶಾಲೆ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿತು.
ಆನ್‌ಲೈನ್ ವ್ಯವಸ್ಥೆಗೆ ಬದಲಾಗುವ ಮೂಲಕ ತಮ್ಮ ಪಯಣದ ಗತಿಯನ್ನು ಪರಿವರ್ತಿಸಿದ ಸಣ್ಣ ಮತ್ತು ಮಧ್ಯಮ ಉದ್ಯಮ ಮಾಲೀಕರ ಹೃದಯಸ್ಪರ್ಶಿ ಕಥೆಗಳು
ಸೋಂಕು ಪಾಸಿಟಿವಿಟಿ ಪ್ರಮಾಣ ಗಣನೀಯವಾಗಿ ತಗ್ಗಿದ್ದು, ಆಫ್‌ಲೈನ್‌ ತರಗತಿ ಆರಂಭಿಸುವ ಬಗ್ಗೆ ಶಾಲೆಗಳು ನಿರ್ಧಾರ ಕೈಗೊಳ್ಳಬಹುದಾಗಿದೆ. ಒಂದೊಮ್ಮೆ ಸೊಂಕು ಮತ್ತೆ ತೀವ್ರಗೊಂಡರೆ ಶಾಲೆಗಳನ್ನು ಮುಚ್ಚಬೇಕಾಗುತ್ತದೆ ಎಂದು ಏಮ್ಸ್‌ ನಿರ್ದೇಶಕ ರಣದೀಪ್‌ ಗುಲೇರಿಯಾ ಹೇಳಿದ್ದಾರೆ. ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳು ಹಂತ ಹಂತವಾಗಿ ಶಾಲೆ ಆರಂಭಿಸಿವೆ. ಮುಂದಿನ ತಿಂಗಳಿನಿಂದ ಶಾಲೆ ಆರಂಭಿಸಲು ಕೇರಳ ಸರಕಾರವೂ ನಿರ್ಧರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ