ಆ್ಯಪ್ನಗರ

ಕಾಂಗ್ರೆಸ್‌ ಜತೆ ಎನ್‌ಸಿಪಿ ವಿಲೀನ ಪ್ರಸ್ತಾವ ಇಲ್ಲ: ಶರದ್‌ ಪವಾರ್‌

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ದೆಹಲಿಯಲ್ಲಿ ಪವಾರ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ತರುವಾಯ ಈ ಊಹಾಪೋಹದ ವರದಿಗಳು ಬಂದಿದ್ದವು.

Vijaya Karnataka Web 2 Jun 2019, 5:01 pm
ಮುಂಬೈ: ತಮ್ಮ ಪಕ್ಷ ಕಾಂಗ್ರೆಸ್ ಪಕ್ಷದಲ್ಲಿ ವಿಲೀನವಾಗಲಿದೆ ಎಂಬ ಊಹಾಪೋಹಗಳಿಗೆ ಎನ್.ಸಿ.ಪಿ. ಅಧ್ಯಕ್ಷ ಶರದ್ ಪವಾರ್ ಪುನರುಚ್ಚರಿಸಿದ್ದಾರೆ.
Vijaya Karnataka Web ಶರದ್‌ ಪವಾರ್‌
ಶರದ್‌ ಪವಾರ್


ಮುಂಬೈನಲ್ಲಿ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಎನ್.ಸಿ.ಪಿ.ಗೆ ತನ್ನದೇ ಅಸ್ತಿತ್ವ ಇದ್ದು, ಅದನ್ನು ಪಕ್ಷ ಮುಂದುವರಿಸಿಕೊಂಡು ಹೋಗಲಿದೆ ಎಂದು ಪವಾರ್ ತಿಳಿಸಿದರು.

ಕೆಲವು ದಿನಗಳಿಂದ ಈ ಕುರಿತು ಊಹಾಪೋಹಗಳು ಕೇಳಿಬರುತ್ತಿದೆ. ವಿಲೀನ ಪ್ರಸ್ತಾವ ಇಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಆದರೂ ಇದು ಮುಂದುವರಿಯುತ್ತಿದೆ. ಕಾಂಗ್ರೆಸ್ ಜತೆ ಎನ್‌ಸಿಪಿ ವಿಲೀನ ಆಗುವುದಿಲ್ಲ. ಇದರಲ್ಲಿ ಯಾವುದೇ ರಾಜೀ ಇಲ್ಲ ಎಂದು ಶರದ್‌ ಪವಾರ್ ಭಾನುವಾರ ಸ್ಪಷ್ಟಪಡಿಸಿದ್ದಾರೆ.

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಿದ್ಧತೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಕುರಿತು ಚರ್ಚಿಸಲು ಹಾಗೂ ಪರಾಮರ್ಶಿಸಲು ಸಭೆ ನಡೆಸಲಾಯಿತು.

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ದೆಹಲಿಯಲ್ಲಿ ಪವಾರ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ತರುವಾಯ ಈ ಊಹಾಪೋಹದ ವರದಿಗಳು ಬಂದಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ